ಹರಿಹರ, ಜ. 29- ನಗರದ ಎಂ.ಕೆ.ಇ.ಟಿ. ಸಿಬಿಎಸ್ಇ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಬಿ.ಆರ್. ಶ್ರೇಯಾ ಇತ್ತೀಚಿಗೆ ನಡೆದ ಸಿರಿಗನ್ನಡ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೆ ರ್ಯಾಂಕ್ ಪಡೆದಿದ್ದಾರೆ.
ಶಾಲಾ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶ್ರೇಯಾಗೆ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ವ್ಯವಸ್ಥಾಪಕ ಅಚ್ಯುತ್ ರಾವ್, ಮುಖ್ಯೋಪಾಧ್ಯಾಯ ಮಂಜುನಾಥ್, ಶಿಕ್ಷಕರಾದ ಮಮತಾ, ಕವಿತಾ ಮತ್ತಿತರರಿದ್ದರು.