ಹಿರಿಯ ಸಾಹಿತಿ ಬಿ.ಟಿ. ಜಾಹ್ನವಿಗೆ `ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ’

ಹಿರಿಯ ಸಾಹಿತಿ ಬಿ.ಟಿ. ಜಾಹ್ನವಿಗೆ  `ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ’

ದಾವಣಗೆರೆ, ಫೆ. 1- ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಹೆಜ್ಜೆ ಗುರುತಿನ ವಿಭಿನ್ನ ಲೇಖಕರಾದ ನಗರದ ಹಿರಿಯ ಸಾಹಿತಿ ಶ್ರೀಮತಿ ಬಿ.ಟಿ. ಜಾಹ್ನವಿ ಅವರಿಗೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ 2023-24ನೇ ಸಾಲಿನ  `ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸರ್ಕಾರದಿಂದ ಕೊಡ ಮಾಡುವ ಜೀವಮಾನ ಸಾಧನೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು    ಜಾಹ್ನವಿ  ಅವರನ್ನು ಸನ್ಮಾನಿಸಿ, ಗೌರವಿಸಿದರು.

error: Content is protected !!