24ನೇ ವಾರ್ಡ್‌ನ ಬೂತ್‌ಗಳಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ

24ನೇ ವಾರ್ಡ್‌ನ ಬೂತ್‌ಗಳಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ

ಎಸ್‌.ಎ. ರವೀಂದ್ರನಾಥ್‌, ಶಿವಯೋಗಿಸ್ವಾಮಿ ಮತ್ತು  ಅತಿಥ್‌ ಅಂಬರ್‌ಕರ್‌ ಕಾರ್ಯಕ್ರಮದಲ್ಲಿ ಭಾಗಿ

ದಾವಣಗೆರೆ ಫೆ. 13 – ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ 24ನೇ ವಾರ್ಡ್‌ನ ಬೂತ್‌ಗಳಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ವಾರ್ಡ್‌ನ ಮನೆ ಮನೆಗೆ ಭೇಟಿ ನೀಡಿ `ಮೋದಿ ಮತ್ತೊಮ್ಮೆ’ ಗೋಡೆ ಬರಹದೊಂದಿಗೆ ನೆಚ್ಚಿನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಾಧನೆ ಕುರಿತು ಕರಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌, ಮಾಜಿ ಮುಖ್ಯ ಸಚೇತಕ  ಶಿವಯೋಗಿ ಸ್ವಾಮಿ, ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ಸುಧಾ ಜಯರುದ್ರೇಶ್‌, 24ನೇ ವಾರ್ಡ್‌ನ ಮಹಾನಗರ ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್‌, ಯುವ ನಾಯಕ, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಅತಿಥ್‌ ಅಂಬರ್‌ಕರ್‌ ಬೂತ್‌ ಅಧ್ಯಕ್ಷರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!