ಅಂಬಿಗರ ಚೌಡಯ್ಯ, ಮಡಿವಾಳ ಮಾಚಿದೇವರ ಜಯಂತಿ

ಅಂಬಿಗರ ಚೌಡಯ್ಯ, ಮಡಿವಾಳ ಮಾಚಿದೇವರ ಜಯಂತಿ

ದಾವಣಗೆರೆ, ಫೆ. 18 – ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ದಾವಣಗೆರೆ ತಾಲ್ಲೂಕು ಘಟಕ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅರಸಾಪುರ ಇವರುಗಳ ಸಂಯುಕ್ತಾ ಶ್ರಯದಲ್ಲಿ ನಡೆದ ಶರಣರಾದ ಅಂಬಿಗರ ಚೌಡಯ್ಯ ಮತ್ತು ಮಡಿವಾಳ ಮಾಚಿದೇವ ಜಯಂತಿಯನ್ನು ಕಾಲೇಜಿನ ಪ್ರಾಚಾರ್ಯ ಕೆ.ಎಚ್‌. ಮಂಜುನಾಥ ರೆಡ್ಡಿ ಅವರು ಉದ್ಘಾಟಿಸಿ ಮಾತನಾಡಿದರು.

ಶರಣರ ವಿಚಾರಗಳನ್ನು ವಿದ್ಯಾರ್ಥಿ ಗಳು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಹೇಳಿದರು. ದತ್ತಿ ಉಪನ್ಯಾಸದ ಅನುಭಾವ ನುಡಿಯ ಅಡಿಯಲ್ಲಿ ವಿಶ್ರಾಂತ ಶಿಕ್ಷಣಾಧಿಕಾರಿಗಳಾದ ಭರಮಪ್ಪ ಮೈಸೂರ್ ಅವರು `ವಚನ ಸಾಹಿತ್ಯದಲ್ಲಿ ವೈಚಾರಿಕತೆ’ ಎಂಬ ವಿಷಯ  ಕುರಿತು ಉಪನ್ಯಾಸ ನೀಡಿದರು. 

ಆಧುನಿಕ ಯುಗದಲ್ಲಿ ಯುವ ಸಮುದಾಯ ಎದುರಿಸುತ್ತಿರುವ ಮನೋಭಾವಗಳಿಗೆ ವಚನ ಸಾಹಿ ತ್ಯದ ಅರಿವು ಸಂಜೀವಿನಿಯಾಗಬಲ್ಲದು, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆ ಗಳು ಯುವ ಜನರನ್ನು ವೈದಿಕತೆಯ ವಿಷದ ಕುಣಿಕೆಗೆ ಆಹಾರವಾಗಿ ಪರಿಣಮಿಸಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ತಾಲ್ಲೂಕು ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್.ಬಿ.ರುದ್ರಗೌಡ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಜಾತಿ ಕಲಹಗಳಿಗೆ ವಚನ ಸಾಹಿತ್ಯದಲ್ಲಿ ಮದ್ದಿದೆ ಎಂದರು. ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ವಚನಗಳನ್ನು ಅಳವಡಿಸಿಕೊಳ್ಳುವ ಮೂಲಕ ಈ ದೇಶದ ಸತ್ಪ್ರಜೆಗಳಾಗಬೇಕೆಂದರು.

ಈ ಸಂದರ್ಭದಲ್ಲಿ ದತ್ತಿ ದಾನಿಗಳಾದ ಕಲ್ಲಿಹಾಳ್ ಶಿವಲಿಂಗಮ್ಮ , ಶಾನಭೋಗ ಹಾಲಯ್ಯ ಹಾಗೂ ದತ್ತಿ ನೀಡಿದ ನಿರಂಜನ ಇವರುಗಳನ್ನು ಸ್ಮರಿಸಲಾಯಿತು. ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷರಾದ ಗಾಯತ್ರಿ ವಸ್ತದ್, ನಗರ ಘಟಕದ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿರಿಗೆರೆ ಪರಮೇಶ್ವರಪ್ಪ  ಉಪಸ್ಥಿತರಿದ್ದರು.  

ಶಿಕ್ಷಕಿ ಪಾಟೀಲ್ ವನಜಾಕ್ಷಿ ವಚನ ಪ್ರಾರ್ಥನೆ ಮಾಡಿದರು. ಉಪನ್ಯಾಸಕರಾದ ಜ್ಞಾನೇಶ್ವರಿ ಸ್ವಾಗತಿಸಿದರು. ಶಿಕ್ಷಕ ಎಂ. ನಾಗರಾಜ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕ.ಸಾ.ಪ. ಪದಾಧಿಕಾರಿಗಳಾದ ಆರ್.ಸಿದ್ದೇಶಪ್ಪ, ಬಿ.ಟಿ. ಪ್ರಕಾಶ್, ಬಿ.ಎಂ.ವಿಶ್ವೇಶ್ವರಯ್ಯ, ಕಲಿವೀರ ಕಳ್ಳಿಮನಿ, ಕೆ.ಸಿ.ನಾಗರಾಜ್, ಪ್ರಕಾಶ್ ಕಡ್ಲೆಬಾಳು ಮತ್ತಿತರರು ಉಪಸ್ಥಿತರಿದ್ದರು.

error: Content is protected !!