ದಾವಣಗೆರೆ, ಮಾ. 10 – ಯಾವುದೇ ಕೆಲಸ ಮಾಡಿದರೂ ಶ್ರದ್ದೆ ಇರಬೇಕು. ಆಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ವಿದ್ಯಾಲಯದ ಗೌರವ ಕಾರ್ಯದರ್ಶಿ ಕೆ.ಎಂ. ಸುರೇಶ್ ತಿಳಿಸಿದರು.
ಇಲ್ಲಿಗೆ ಸಮೀಪದ ಗೋಣಿವಾಡದಲ್ಲಿರುವ ಶ್ರೀ ಸೋಮೇಶ್ವರ ವಸತಿ ಶಾಲೆಯಲ್ಲಿ ನಡೆದ ಶಾರದ ಪೂಜೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು. ಶ್ರದ್ದೆ ಮತ್ತು ಭಕ್ತಿ ಯಶಸ್ಸಿನ ಕೀಲಿ ಕೈಗಳಿದ್ದಂತೆ, ಮಾಡುವ ಕೆಲಸ ನಮಗೆ ತೃಪ್ತಿ ತರಬೇಕು ಎಂದರು. ವಿದ್ಯಾರ್ಥಿ ಜೀವನ ಮತ್ತೆ ಸಿಗುವುದಿಲ್ಲ. ಹೀಗಾಗಿ ತಾವೆಲ್ಲರೂ ಚೆನ್ನಾಗಿ ಓದಿ ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ತಂದೆ ತಾಯಿಗಳಿಗೆ ಉತ್ತಮ ಹೆಸರು ತರಬೇಕೆಂದು ತಿಳಿಸಿದರು.
ಬಹುಮಾನ ಪುರಸ್ಕಾರ ನೀಡಿದ ಶಾಲೆಯ ಹಿತೈಷಿಗಳಾದ ಪರಮೇಶ್ವರಪ್ಪ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆದಾಗ ಮಾತ್ರ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ರಾದ ವೀಣಾ ಮತ್ತು ಇತರರು ಉಪಸ್ಥಿತರಿದ್ದರು.