`ಕರಟಕ ದಮನಕ’ ವಿಜಯ ಯಾತ್ರೆ

`ಕರಟಕ ದಮನಕ’ ವಿಜಯ ಯಾತ್ರೆ

 `ಕರಟಕ ದಮನಕ’ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗದಿಂದ ಅದೇ ಮಾರ್ಗವಾಗಿ ತ್ರಿನೇತ್ರ ಚಿತ್ರಮಂದಿರದ ವರೆಗೆ ಶಿವರಾಜ್ ಕುಮಾರ್ ಮೆರವಣಿಗೆ ನಡೆಸಿದರು. 

ಈ ವೇಳೆ ಮಾತನಾಡಿದ ಅವರು, ನಾನು ಹಾಗೂ ಪ್ರಭುದೇವ್‌ ನಟಿಸಿರುವ ಕರಟಕ ದಮನಕ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಮಾನಿಗಳು ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಖುಷಿ ತಂದಿದೆ. ಪ್ರಭುದೇವ ಅವರ ಜೊತೆ ನೃತ್ಯ ಮಾಡಿದ್ದು ತುಂಬಾನೇ ಖುಷಿ ಕೊಟ್ಟಿದೆಯಲ್ಲದೇ, ಹೊಸ ಅನುಭವವಾಗಿದೆ ಎಂದು ಹೇಳಿದರು. ನಿರ್ದೇಶಕ ಯೋಗರಾಜ್‌ ಭಟ್ಟರ ಶ್ರಮವೂ ಇದೆ. ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರ ಗಳಲ್ಲಿ ಚಿತ್ರವು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಚಿತ್ರವು ಅಭಿಮಾನಿಗಳಿಗೆ ಇಷ್ಟವಾಗಿದೆ. ತುಂಬಿದ ಪ್ರದರ್ಶನ ಕಾಣುತ್ತಿದ್ದು, ಇದು ಎಲ್ಲರಿಗೂ ಸಂತಸ ತಂದಿದೆ ಎಂದರು. ನಿರ್ದೇಶಕ ಯೋಗರಾಜ್ ಭಟ್, ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಯೋಗೀಶ್ ಇತರರು ಈ ಸಂದರ್ಭದಲ್ಲಿದ್ದರು.

error: Content is protected !!