ಚನ್ನಗಿರಿಯಲ್ಲಿ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಚನ್ನಗಿರಿಯಲ್ಲಿ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಚನ್ನಗಿರಿ, ಮಾ. 11-  ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಿದ ತಾಲ್ಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡವನ್ನು ಚನ್ನಗಿರಿ ಶಾಸಕ  ಬಸವರಾಜು ವಿ.ಶಿವಗಂಗಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ಮುಖ್ಯಸ್ಥ, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಬಿ.ಯು. ಯೋಗೇಂದ್ರ ಕುಮಾರ್‌ ಉಪಸ್ಥಿತರಿದ್ದರು. ಸದರಿ ಆಸ್ಪತ್ರೆಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಮುಂದುವರೆದ ಕಾಮಗಾರಿಗೂ ಸಹಿತ ಇದೇ ಸಂದರ್ಭದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಹಾಯಕ ಅಭಿಯಂತರರು ಕೆ.ಆರ್.ಆಯ್.ಡಿ.ಎಲ್.ತಾಲ್ಲೂಕು ಆರೋಗ್ಯಾಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳಾದ ಡಾ. ರಮೇಶಪ್ಪ ಲಮಾಣಿ , ಡಾ. ಸದಾಶಿವ ಕೆ., ಡಾ. ಶಾಲಿನಿ, ಡಾ. ಸೈಯ್ಯದ್ ಶಂಷುದ್ದೀನ್, ಡಾ. ಸಿದ್ದೇಶ್ ಈ., ಬಿಸನಳ್ಳಿ ಮತ್ತು ತಾಲ್ಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

error: Content is protected !!