ಲೋಕಸಭೆ ಗೆಲುವಿಗೆ ಕಾರ್ಯಕರ್ತರು ಸಂಘಟಿತರಾಗಬೇಕು

ಲೋಕಸಭೆ ಗೆಲುವಿಗೆ ಕಾರ್ಯಕರ್ತರು ಸಂಘಟಿತರಾಗಬೇಕು

ರಾಣೇಬೆನ್ನೂರು ಬಿಜೆಪಿ ಪದಗ್ರಹಣ ಕಾರ್ಯಕ್ರಮದಲ್ಲಿ ಅರುಣಕುಮಾರ್  

ರಾಣೇಬೆನ್ನೂರು,ಮಾ.17-   ಕಾರ್ಯ ಕರ್ತರು ಸಂಘಟಿತರಾಗಿ ಲೋಕಸಭೆ ಚುನಾವಣೆ ಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಭಾರೀ ಅಂತರದ ಗೆಲುವು ಸಾಧಿಸುವುದರೊಂದಿಗೆ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಅರುಣಕುಮಾರ್ ಪೂಜಾರ್ ಮನವಿ ಮಾಡಿದರು. 

ಪಕ್ಷದ ಕಛೇರಿಯಲ್ಲಿ ತಾಲ್ಲೂಕಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸಂಸ್ಕೃತಿ  ಕಲಿಸುವ ಪಕ್ಷ,  ಪ್ರತಿ ಯೊಬ್ಬ  ಕಾರ್ಯಕರ್ತರು ಮುಖಂಡರಾಗಬೇಕು. ಬರಲಿರುವ ಲೋಕಸಭೆ ಹಾಗೂ ಸ್ಥಳೀಯ ಸಂಘ, ಸಂಸ್ಥೆಗಳಲ್ಲಿ ಪಕ್ಷ ಆಡಳಿತ ನಡೆಸುವಂತೆ ಕಾರ್ಯಕರ್ತರು ಶ್ರಮಿಸಬೇಕು  ಎಂದು  ರಾಜ್ಯ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ ಹೇಳಿ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.

ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸುವುದ ರೊಂದಿಗೆ ಬರಲಿರುವ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಆಡಳಿತಕ್ಕೆ ತರಲು ನೂತನ ಪದಾಧಿಕಾರಿ ಗಳು ಶ್ರಮಿಸಬೇಕು ಎಂದು ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಭಾರತಿ ಜಂಬಗಿ, ಮುಖಂಡರಾದ ಎ.ಬಿ.ಪಾಟೀಲ, ಎಸ್.ಎಸ್.ರಾಮಲಿಂಗಣ್ಣನವರ, ಚೋಳಪ್ಪ ಕಸವಾಳ, ಪ್ರಕಾಶ ಪೂಜಾರ, ಸಂತೋಷ ಪಾಟೀಲ ಹೇಳಿದರು.

ನೂತನ ಅಧ್ಯಕ್ಷರಾದ ಪರಮೇಶ ಗೂಳಣ್ಣನವರ, ರಮೇಶ ಗುತ್ತಲ ಹಾಗೂ ಇನ್ನಿತರೆ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿ ಗೌರವಿಸಲಾಯಿತು. ತ್ರಿವೇಣಿ ಪವಾರ, ಉಸ್ತುವಾರಿ ಕಲ್ಲೇಶ, ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಭಾರತಿ ಅಳವಂಡಿ, ಸಿದ್ದಪ್ಪ ಚಿಕ್ಕಬಿದರಿ, ದೀಪಕ್‌ ಹರಪನಹಳ್ಳಿ, ಮಂಜುನಾಥ ಓಲೇಕಾರ, ಅಮೋಘ ಬದಾಮಿ ಮತ್ತಿತರರಿದ್ದರು.

error: Content is protected !!