ದಾವಣಗೆರೆ, ಮಾ. 26 – ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಬಾಡಾ ಕ್ರಾಸ್ ಚೆಕ್ಪೋಸ್ಟ್ನಲ್ಲಿ ಎರಡು ಪ್ರಕರಣಗಳಲ್ಲಿ 7.43 ಲಕ್ಷ ರೂ. ನಗದು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ನಗರ ಪಾಲಿಕೆ ಆಯುಕ್ತರೂ ಆಗಿರುವ ಸಹಾಯಕ ಚುನಾವಣಾಧಿಕಾರಿ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.
ಕೆಎ-17-ಇಪಿ-7945 ಬೈಕ್ ಮೂಲಕ ರೂ. 2,50 ಲಕ್ಷ ಮತ್ತು ಕೆ.ಎ.17-ಹೆಚ್ಪಿ-6553 ಸಂಖ್ಯೆಯ ವಾಹನದಲ್ಲಿ ರೂ.4.93 ಲಕ್ಷ ನಗದು ಸಾಗಣೆ ಮಾಡುತ್ತಿದ್ದ ವೇಳೆ ಚೆಕ್ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದು ಹಣ ಖಜಾನೆಯಲ್ಲಿರಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಚೆಕ್ಪೋಸ್ಟ್ ತಂಡದ ಅಧಿಕಾರಿ ಉಮೇಶ್ ಕುಮಾರ್ ಅವರು ಸ್ಥಳ ತನಿಖೆ ಮಾಡಿ ವರದಿ ನೀಡಿರುತ್ತಾರೆ.