ಜಿಲ್ಲಾ – ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡಲು ಒತ್ತಾಯ

ಜಿಲ್ಲಾ – ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡಲು ಒತ್ತಾಯ

ದಾವಣಗೆರೆ, ಮಾ. 28 – ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ಜಾಗೃತಿ, ಅರಿವು ಮೂಡಿಸುವ, ಮತ ಚಲಾವಣೆಯ ಕುರಿತು ಜಾಹೀರಾತುಗಳನ್ನು ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಬಿಡುಗಡೆ ಮಾಡುವಂತೆ ಕೋರಿ, ಕರ್ನಾಟಕ  ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ದಾವಣಗೆರೆ ಜಿಲ್ಲಾ ಘಟಕದಿಂದ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರಿನ್ ಬಾನು ಎಸ್. ಬಳ್ಳಾರಿ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್. ಸುಧಾಕರ, ಜಿಲ್ಲಾಧ್ಯಕ್ಷ ಆರ್.ರವಿ, ಉಪಾಧ್ಯಕ್ಷರಾದ ಕೆ. ಏಕಾಂತಪ್ಪ, ಎ. ಫಕೃದ್ಧೀನ್, ಪ್ರಧಾನ ಕಾರ್ಯದರ್ಶಿ ಜೆ.ಎಸ್. ವೀರೇಶ್ , ಖಜಾಂಚಿ ಸುರೇಶ್ ಆರ್. ಕುಣಿಬೆಳಕೆರೆ, ಕಾರ್ಯದರ್ಶಿ ಕೆ.ಹೆಚ್.ಗೋವಿಂದ ರಾಜು, ಸಂಘಟನಾ ಕಾರ್ಯದರ್ಶಿ ಜಿ.ಎಂ.ಮಂಜುನಾಥ್,  ಸದಸ್ಯ ಎನ್ .ನಂದನ್ ಕುಮಾರ್ ಸೇರಿದಂತೆ ಇತರರು ಇದ್ದರು.

error: Content is protected !!