ರಂಗೋಲಿ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ರಂಗೋಲಿ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ದಾವಣಗೆರೆ, ಏ. 4- ತಾಲ್ಲೂಕಿನ ಕಾಡಜ್ಜಿ ಗ್ರಾಮ ಪಂಚಾಯ್ತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣಾ ಮತದಾನ ಜಾಗೃತಿ ಅಂಗವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಿಳೆ ಯರಿಗಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನ ನೀತಿ ಹಾಗೂ ಘೋಷವಾಕ್ಯಗಳೊಂದಿಗೆ ಜಾಥಾ ನಡೆಸಲಾಯಿತು.

ರಂಗೋಲಿ ಸ್ಪರ್ಧೆಯಲ್ಲಿ ಗ್ರಾಮದ ನೂರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ವಿಜೇತರಾದವರಿಗೆ ಗ್ರಾಮ ಪಂಚಾಯತಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಹೆಚ್.ಎನ್. ಕವಿತಾಗೆ ವಿಶೇಷ ಬಹುಮಾನ, ಮಂಜುಳ ಹಾಗೂ ಪೂಜಾ ಪ್ರಥಮ, ಆರ್. ರೇಖಾ ದ್ವಿತೀಯ, ಯಲ್ಲಮ್ಮ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. 

error: Content is protected !!