ಹರಿಹರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಬೀಬುಲ್ಲಾ ಕಾಂಗ್ರೆಸ್‌ಗೆ ಸೇರ್ಪಡೆ

ಹರಿಹರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಬೀಬುಲ್ಲಾ ಕಾಂಗ್ರೆಸ್‌ಗೆ ಸೇರ್ಪಡೆ

ಹರಿಹರ,ಏ.11- ಹರಿಹರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ  ಹಬೀಬುಲ್ಲಾ ಗನ್ನಾ   ಸೇರಿದಂತೆ  ಪಕ್ಷದ ನೂರಾರು ಪದಾಧಿಕಾರಿಗಳು ಜೆಡಿಎಸ್ ಪಕ್ಷವನ್ನು ತೊರೆದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಮಾಜಿ ಶಾಸಕ ಎಸ್.ರಾಮಪ್ಪ, ಮುಖಂಡ ನಂದಿಗಾವಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 

ಜೆಡಿಎಸ್‌ನ ಅಬ್ದುಲ್ ರಶೀದ್, ಅಬ್ದುಲ್ ಬಷೀರ್, ಅಬ್ದುಲ್ ಕರೀಮ್, ಹನೀಫ್ ಸಾಬ್, ಸೈಯದ್ ಅಫ್ರೀದಿ, ಅಬ್ದುಲ್, ಮುನೀರ್, ರಜಾಕ್ ಸಾಬ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಪ್ರಮುಖರು. ಈ ಸಂದರ್ಭದಲ್ಲಿ ಮುಖಂಡರುಗಳಾದ ಎಸ್.ಬಸಪ್ಪ, ಕೃಷ್ಣ ಸಾ ಭೂತೆ, ವಕೀಲ ಎಂ. ನಾಗೇಂದ್ರಪ್ಪ, ರೇವಣಸಿದ್ದಪ್ಪ, ಶಂಕರ್‌ ಖಟಾವಕರ್, ಸೈಯದ್ ಸನಾವುಲ್ಲಾ, ಹಾಲೇಶ್ ಗೌಡ, ಕೆ.ಕೆ.ರಫೀಕ್, ಅಲೀಂಬಾಷಾ, ಜಾಕೀರ್ ಸಾಬ್, ನಜೀರ್ ಹುಸೇನ್, ಎನ್.ಹುಲಿಗೇಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!