ದಾವಣಗೆರೆ, ಏ.15- ಭಾರತದ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದಿಂದ ಪಡೆದಿರುವ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ನಗರದ ಸಾಮಾಜಿಕ ಸೇವಾ ಕಾರ್ಯಕರ್ತ ಜೆ. ಸೋಮನಾಥ್ ಅಭಿನಂದಿಸಿದ್ದಾರೆ. ತಾವು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲೆಂದು ನಗರಕ್ಕೆ ಆಗಮಿಸಿದ್ದ ಅಡ್ವಾಣಿ ಅವರನ್ನು ಭೇಟಿಯಾದಾಗ ಅವರೊಂದಿಗೆ ಕುಶಲೋಪರಿ ನಡೆಸಿದ್ದನ್ನು ಸೋಮಣ್ಣ ಮೆಲಕು ಹಾಕಿದ್ದಾರೆ. ಆರ್.ಎಸ್.ಎಸ್. ಮತ್ತು ಬಿಜೆಪಿಯಲ್ಲಿ ಉನ್ನತ ಮತ್ತು ಕೇಂದ್ರ ಸರ್ಕಾರದಲ್ಲಿ ಅತ್ಯುನ್ನತ ಸ್ಥಾನ ಮಾನಗಳನ್ನು ಪಡೆದು, ಆ ಮೂಲಕ ದೇಶಕ್ಕೆ ಸಲ್ಲಿಸಿದ ಅಡ್ವಾಣಿ ಅವರ ಸೇವೆ ಅನನ್ಯ. ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಮಾನ್ಯ ಮಾಡಿರುವುದು ಶ್ಲ್ಯಾಘನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ.
ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ : ಸೋಮಣ್ಣ ಸಂತಸ
![09 advani 16.04.2024 ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ : ಸೋಮಣ್ಣ ಸಂತಸ](https://janathavani.com/wp-content/uploads/2024/04/09-advani-16.04.2024.jpg)