ಬ್ರಾಹ್ಮಣ ಸಮಾಜದಿಂದ ಮಹಿಳಾ ದಿನಾಚರಣೆ

ಬ್ರಾಹ್ಮಣ ಸಮಾಜದಿಂದ ಮಹಿಳಾ ದಿನಾಚರಣೆ

ದಾವಣಗೆರೆ, ಏ. 17- ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದಿಂದ ವಾರ್ಷಿಕೋತ್ಸವ ಮತ್ತು ಮಹಿಳಾ ದಿನಾಚರಣೆ ಯಶಸ್ವಿಯಾಗಿ ನಡೆಯಿತು. ಮಹಿಳಾ ವಿಭಾಗದ ಅಧ್ಯಕ್ಷರಾದ ನಳಿನಿ ಅಚ್ಯುತ್ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶ್ರೀಮತಿ ಜ್ಯೋತಿ ಉಪಾಧ್ಯಾಯ ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಹಿಳಾ ಉದ್ಯಮಿ ಶ್ರೀ ಲಕ್ಷ್ಮೀನರಸಿಂಹ ಸಂಘದ ಅಧ್ಯಕ್ಷೆ ಶ್ಯಾಮಲ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.

ಸಾವಿತ್ರಮ್ಮ ಶಾಸ್ತ್ರಿ ಪ್ರಾರ್ಥಿಸಿದರು. ಶಾಂತಾ ನಾಗರಾಜ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಅಡಿಗ ಮಹಿಳಾ ವಿಭಾಗದ ವರದಿ ವಾಚಿಸಿದರು. ಹೇಮಾ ನಾರಾಯಣ್ ಮತ್ತು ಸರಸ್ವತಿ ನಿರಂಜನ ಅತಿಥಿಗಳನ್ನು ಪರಿಚಯಿಸಿದರು. ಕಾಮಾಕ್ಷಿ ಪಟ್ಟಾಭಿರಾಮನ್ ನಿರೂಪಿಸಿದರು. ವಸುಧಾ ಕುಲಕರ್ಣಿ ಸ್ಪರ್ಧಾ ವಿಜೇತರ ಪಟ್ಟಿಯನ್ನು ಓದಿದರು. ಕೋಮಲ ವಸಂತ ಕುಮಾರ್ ವಂದಿಸಿದರು.

error: Content is protected !!