ಹರಿಹರದಲ್ಲಿ ಇಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರೋಡ್‌ ಶೋ

ಹರಿಹರದಲ್ಲಿ ಇಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರೋಡ್‌ ಶೋ

ಹರಿಹರ, ಏ,24-  ರಾಜ್ಯ ಬಿಜೆಪಿ  ಅಧ್ಯಕ್ಷ ಬಿ.ವೈ. ವಿಜಯೇಂದ್ರ ನಾಳೆ ದಿನಾಂಕ 25 ರ ಗುರುವಾರ ನಗರಕ್ಕೆ ಆಗಮಿಸಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಜಿ.ಎಂ. ಸಿದ್ದೇಶ್ವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜಶೇಖರ್ ನಾಗಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,  ಗುರುವಾರ ಸಂಜೆ 4 ಗಂಟೆಗೆ ನಗರಕ್ಕೆ ಆಗಮಿಸುವ ವಿಜಯೇಂದ್ರ ಅವರು ಶಿವಮೊಗ್ಗ ರಸ್ತೆಯ ಪಕ್ಕೀರೇಶ್ವರ ಮಠದ ಮುಂಭಾಗದಿಂದ ಬೃಹತ್ ರೋಡ್ ಶೋನಲ್ಲಿ  ಪಾಲ್ಗೊಂಡು   ಮತಯಾಚನೆ ಮಾಡಲಿದ್ದಾರೆ.  ಶಿವಮೊಗ್ಗ ರಸ್ತೆ, ರಾಣಿ ಚೆನ್ನಮ್ಮ ವೃತ್ತ, ಮುಖ್ಯ ರಸ್ತೆ,ಯಲ್ಲಿ ಸಂಚರಿಸಿ ಗಾಂಧಿ ವೃತ್ತದಲ್ಲಿ ಅಂತ್ಯಗೊಳ್ಳಲಿದೆ. 

ಸಂಸದ ಜಿ.ಎಂ. ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ. ಚಿದಾನಂದಪ್ಪ, ಜಿಲ್ಲಾ ಬಿಜೆಪಿ ಸಂಚಾಲಕ ಎಸ್.ಎಂ. ವೀರೇಶ್ ಹನಗವಾಡಿ, ತಾಲ್ಲೂಕು ಸಂಚಾಲಕ ರಾಜು ರೋಖಡೆ, ಜೆಡಿಎಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಪರಮೇಶ್ವರಪ್ಪ, ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಲಿಂಗರಾಜ್ ಹಿಂಡಸಗಟ್ಟೆ ನಗರ ಅಧ್ಯಕ್ಷ ಅಜಿತ್ ಸಾವಂತ್ ಸೇರಿದಂತೆ ಹಲವಾರು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. 

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಐರಣಿ ಮಾತನಾಡಿ, ಈ ರೋಡ್‌ ಶೋನಲ್ಲಿ   10 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು,     ತಾಲ್ಲೂಕಿನಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಮತಗಳ ಲೀಡ್  ಗಾಯತ್ರಿ ಸಿದ್ದೇಶ್ವರ ಅವರೆಗೆ ಲಭಿಸಲಿವೆ ಎಂದು ಹೇಳಿದರು. ‌

ಪತ್ರಿಕಾ ಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಅಜಿತ್  ಸಾವಂತ್, ಪ್ರಧಾನ ಕಾರ್ಯದರ್ಶಿ ಹೆಚ್. ಮಂಜಾನಾಯ್ಕ್,  ತುಳಜಪ್ಪ ಭೂತೆ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಡಕಿ ಕುಮಾರ್, ಬಿಜೆಪಿ ಯುವ ಘಟಕದ ಅಧ್ಯಕ್ಷ ರವಿರಾಯ್ಕರ್, ಬಿಜೆಪಿ ಮುಖಂಡ ಸುನೀಲ್ ಇತರರು ಹಾಜರಿದ್ದರು.

error: Content is protected !!