ಭರಮಸಾಗರ : ತುರ್ತು ಪರಿಸ್ಥಿತಿ ನಿರ್ವಹಣೆ ಉಪನ್ಯಾಸ

ಭರಮಸಾಗರ : ತುರ್ತು ಪರಿಸ್ಥಿತಿ ನಿರ್ವಹಣೆ ಉಪನ್ಯಾಸ

ಭರಮಸಾಗರ, ಏ.24- ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ  ಕಾಲೇಜಿನಲ್ಲಿ ಬುಧವಾರ ಪ್ರಥಮ ಚಿಕಿತ್ಸಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ  ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್‌. ಎಸ್‌. ಕುಮಾರ್‌ ಅವರು ತುರ್ತು ಪರಿಸ್ಥಿತಿಗಳ ನಿರ್ವಹಣೆ ಮತ್ತು ಜೀವ ಉಳಿಸುವ ಪ್ರಥಮ ಚಿಕಿತ್ಸೆ ಕುರಿತು ಉಪನ್ಯಾಸ ನೀಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ.ಎ.ಎಂ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಜ್ಯೋತಿ, ನಿರ್ದೇಶಕ ಬಿ.ವಿ. ಧನಂಜಯಮೂರ್ತಿ, ಸಂಯೋಜಕ ಎನ್‌. ಶಿವಕುಮಾರ, ಕಾಲೇಜಿನ ಪ್ರಾಚಾರ್ಯೆ ಡಾ. ಎಸ್‌. ಶಶಿಕಲಾ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಕೆ.ಎಸ್‌. ಸೌಮ್ಯ ಮತ್ತು ಸಿಬ್ಬಂದಿ ಇದ್ದರು.

error: Content is protected !!