ಹರಪನಹಳ್ಳಿ ತಾಲ್ಲೂಕಿನಲ್ಲಿ ಮತದಾನ ಜಾಗೃತಿ ಜಾಥಾ

ಹರಪನಹಳ್ಳಿ ತಾಲ್ಲೂಕಿನಲ್ಲಿ  ಮತದಾನ ಜಾಗೃತಿ ಜಾಥಾ

ಹರಪನಹಳ್ಳಿ, ಏ. 26 – ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಾಲ್ಲೂ ಕಿನ ಮೈದೂರು ಗ್ರಾಮದಲ್ಲಿ ಗುರುವಾರ ಗ್ರಾಮ ಪಂಚಾಯ್ತಿ ವತಿಯಿಂದ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮತದಾನ ಜಾಗೃತಿ ಜಾಥಾಕ್ಕೆ ಪಿಡಿಒ ಬಿ.ಎಂ. ರೇವಣಸಿದ್ದಪ್ಪ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರೂ ತಪ್ಪದೇ ಮೇ 7ರಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಿತ ಕಾಪಾಡಬೇಕೆಂದು ಹೇಳಿದರು. 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಎ. ಶಿವಮ್ಮ, ಸದಸ್ಯರಾದ ಮಹಾಲಿಂಗಯ್ಯ, ಮದ್ದಾನಸ್ವಾಮಿ, ನಾಗವೇಣಿ ಸೇರಿದಂತೆ ಸಿಬ್ಬಂದಿ ಸಾರ್ವಜನಿಕರು ಇದ್ದರು.

error: Content is protected !!