ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ಹರಿಹರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ಡಾ. ಪ್ರಭಾ ಮಲ್ಲಿಕಾರ್ಜುನ್ ಪರ  ಹರಿಹರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ಮಲೇಬೆನ್ನೂರು, ಏ.26- ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಹೆಚ್.ಎಸ್.ನಾಗರಾಜ್, ಬಿ.ಎಂ.ವಾಗೀಶ್ ಸ್ವಾಮಿ ಅವರು ಶುಕ್ರವಾರ ಕೊಂಡಜ್ಜಿ ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಎಸ್.ರಾಮಪ್ಪ ಅವರು, ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಪಕ್ಷಾತೀತವಾಗಿ ಅತ್ಯಧಿಕ ಮತಗಳಿಂದ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿದರು.

ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಬಿ.ಎಂ.ವಾಗೀಶ್ ಸ್ವಾಮಿ ಮತ್ತು ಹೆಚ್.ಎಸ್.ನಾಗರಾಜ್ ಅವರು ಕಾಂಗ್ರೆಸ್ ಸೇರಿದ ನಂತರ ಪಕ್ಷದ ಗೆಲುವಿಗಾಗಿ ಬಹಳ ಶ್ರಮ ವಹಿಸಿ ಕೆಲಸ ಮಾಡುತ್ತಿರುವುದು ಕಾರ್ಯ ಕರ್ತರ ಉತ್ಸಾಹ ಹೆಚ್ಚಿಸಿದೆ ಎಂದರು.

ಗುತ್ತೂರು ಹಾಲೇಶಗೌಡ, ಬೆಳ್ಳೂಡಿಯ ನರೇಂದ್ರ, ರಾಜು, ಮಲೇಬೆನ್ನೂರಿನ ಗೌಡ್ರ ಮಂಜಣ್ಣ, ಕುಂಬಳೂರು ವಾಸು ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಈ ವೇಳೆ ಹಾಜರಿದ್ದರು.

error: Content is protected !!