ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಅವರಿಗೆ ಎರಡು ಲಕ್ಷ ದೇಣಿಗೆ ನೀಡಿದ ಇಂಜಿನಿಯರ್‌

ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಅವರಿಗೆ  ಎರಡು ಲಕ್ಷ ದೇಣಿಗೆ ನೀಡಿದ ಇಂಜಿನಿಯರ್‌

ನ್ಯಾಮತಿ, ಮೇ 1 – ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನ್ಯಾಮತಿ ಪಟ್ಟಣದಲ್ಲಿ ಬಹಿರಂಗ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನಿಂದ ಬಂದು ಒಂದು ತಿಂಗಳಿನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂ.ಗಳನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀಡಿದರು.

ನಂತರ ಮಾತನಾಡಿದ ರಮೇಶ್, ಸಾಮಾಜಿಕ ಜಾಲತಾಣದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಸಾಮಾಜಿಕ ಕಾರ್ಯಗಳ ಬಗ್ಗೆ ನೋಡಿದ್ದು, ಸದಾ ಬಡವರ ಬಗ್ಗೆ ಮಿಡಿಯುವ ತಾಯಿ ಹೃದಯದ ಇವರು ಚುನಾವಣೆಯಲ್ಲಿ ಗೆದ್ದು ಸಮಾಜ ಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನಿಂದ ಬಂದು ಕಳೆದ ಒಂದು ತಿಂಗಳಿನಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಇದೇ ಮೊದಲ ಬಾರಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇರವಾಗಿ ಭೇಟಿ ಮಾಡಿದ್ದಾಗಿ, ಹರ್ಷ ವ್ಯಕ್ತಪಡಿಸಿದರು.  ವಿದ್ಯಾವಂತ ಯುವಕರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಅವರ ಬೆಂಬಲಕ್ಕೆ ನಿಂತು ಅವರ ಸಮಾಜ ಸೇವೆಯಲ್ಲಿ ಕೈಜೋಡಿಸಲು ಅವರು ಮನವಿ ಮಾಡಿದರು.

error: Content is protected !!