ಹರಿಹರ, ಮೇ 3- ನಗರದ ನಾಡ್ ಬಂದ್ ಷಾವಲಿ ದರ್ಗಾಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಭೇಟಿ ಕೊಟ್ಟು ಆಶೀರ್ವಾದ ಪಡೆದುಕೊಂಡರು.
ಈ ವೇಳೆ `ಜನತಾವಾಣಿ’ಯೊಂದಿಗೆ ಮಾತನಾಡಿದ ಅವರು, ನಾವು ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರು ನನಗೆ ಬೆಂಬಲಿಸುತ್ತಿದ್ದಾರೆ. ಇದನ್ನು ನೋಡಿದಾಗ ನಾನು ಕನಿಷ್ಠ ಪಕ್ಷ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲವ ಭರವಸೆಯನ್ನು ಹೊಂದಿರುವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್, ನಗರಸಭೆ ಸದಸ್ಯ ಕೆ.ಜಿ.ಸಿದ್ದೇಶ್, ಸಂತೋಷ ನೋಟದರ್, ಮುಸ್ಲಿಂ ಸಮುದಾಯದ ಮುಖಂಡರಾದ ಅಹ್ಮದ್ ಖಾನ್, ಬಿ.ಕೆ.ಬಾಷಾ, ಹಾಜಿಹಾಲಿ ಇತರರು ಹಾಜರಿದ್ದರು.