ಮತಗಟ್ಟೆ ಸಿಬ್ಬಂದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ

ಮತಗಟ್ಟೆ ಸಿಬ್ಬಂದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ

ದಾವಣಗೆರೆ, ಮೇ 7- ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತಗಟ್ಟೆ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮಧ್ಯಾಹ್ನ  ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1693 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ ಎಲ್ಲರಿಗೂ ಮಧ್ಯಾಹ್ನದ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದಾಗಿ ಮತಗಟ್ಟೆ ಸಿಬ್ಬಂದಿಗಳು ಉತ್ಸಾಹದೊಂದಿಗೆ ಚುನಾವಣಾ ಕರ್ತವ್ಯದಲ್ಲಿ ತೊಡಗಿದ್ದರು.

error: Content is protected !!