ಅಕ್ಕಮಹಾದೇವಿ ಸಮಾಜದಲ್ಲಿ ಹುಣ್ಣಿಮೆ ಕಾರ್ಯಕ್ರಮ, ಬಸವ ಜಯಂತಿ

ಅಕ್ಕಮಹಾದೇವಿ ಸಮಾಜದಲ್ಲಿ ಹುಣ್ಣಿಮೆ ಕಾರ್ಯಕ್ರಮ,  ಬಸವ ಜಯಂತಿ

ದಾವಣಗೆರೆ, ಮೇ 24- ನಗರದ ಅಕ್ಕಮಹಾದೇವಿ ಸಮಾಜದಲ್ಲಿ ಇಂದು ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಬಸವೇಶ್ವರ ಜಯಂತಿ ಹಾಗೂ ತಾಯಂದಿರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಬಸವಣ್ಣನವರ ಕುರಿತು ಹರಿಹರದ ಶ್ರೀಶೈಲ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಶ್ರೀಮತಿ ಸೌಭಾಗ್ಯ ಎಸ್. ಹಿರೇಮಠ ಮಾತನಾಡಿದರು.

 ಅಕ್ಕಮಹಾದೇವಿ ಸಮಾಜದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಕೆ.ಕೆ‌. ಸುಶೀಲಮ್ಮ ಅಧ್ಯಕ್ಷತೆ ವಹಿಸಿದ್ದರು.  ನೀಲಗುಂದ ಜಯಮ್ಮ ಅವರು ಚಿಂತನ-ಮಂಥನ ಕಾರ್ಯಕ್ರಮ ನಡೆಸಿಕೊಟ್ಟರು. ಆಶಾ ಚಿತ್ರಕಿ ಅವರಿಂದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಶ್ರೀಮತಿ ಶಾಂತಾ ಯಾವಗಲ್ ಅವರು ಸಂಯೋಜಿಸಿದ್ದ ಕಾರ್ಯಕ್ರಮದಲ್ಲಿ ವಚನ ಗಾಯನ ಸ್ಪರ್ಧೆ ನಡೆಯಿತು.

ಕಾರ್ಯದರ್ಶಿ ಸುವರ್ಣ ದೊಗ್ಗಳ್ಳಿ ಕಾರ್ಯಕ್ರಮ ಕುರಿತು ಮಾತನಾಡಿದರು.

error: Content is protected !!