ದವನ್ ಕಾಲೇಜು ವಿದ್ಯಾರ್ಥಿಗಳ ಬೀದಿ ನಾಟಕ

ದವನ್ ಕಾಲೇಜು ವಿದ್ಯಾರ್ಥಿಗಳ ಬೀದಿ ನಾಟಕ

`ವಿದೇಶದಲ್ಲಿ ಉದ್ಯೋಗವೇ’ ಇಲ್ಲೊಂದು ಕಿವಿಮಾತಿದೆ ನೋಡಿ…!

ದಾವಣಗೆರೆ, ಮೇ 31 – ನೋಡಿದ್ದು ಸುಳ್ಳಾಗಬಹುದು, ಕೇಳಿದ್ದು ಸುಳ್ಳಾಗಬಹುದು ವಿಚಾ ರಿಸಿ ಯೋಚಿಸಿದಾಗ ವಿಷಯ ತಿಳಿವುದು ಹೀಗೆ ಭೋರ್ಗರೆದ ದನಿ ಶುಕ್ರವಾರ ನಗರದ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ನೆರೆದಿದ್ದವರ ಮನಕ್ಕೆ ನಾಟಿತು ಎಂದರೆ ತಪ್ಪಾಗಲಾರದು.

ಹೌದು ! ನಗರದ ದವನ್ ಕಾಲೇಜು ವಿದ್ಯಾರ್ಥಿಗಳು ಇಂದು ರಾಮ್ ಅಂಡ್ ಕೋ ಸರ್ಕಲ್‌ನಲ್ಲಿ ಬೀದಿ ನಾಟಕ ಮಾಡುವ ಮೂಲಕ ಇಂದಿನ ಯುವ ಪೀಳಿಗೆಯಲ್ಲಿ ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರ ಮನ ಮಿಡಿಯುವಂತೆ ಬೀದಿ ನಾಟಕವನ್ನು ಪ್ರಸ್ತುತ ಪಡಿಸಿದರು.

ದಿಢೀರನೇ ಶ್ರೀಮಂತರಾಗಬೇಕೆ ನ್ನುವ ಹವಣಿಕೆಗೆ, ವಿದೇಶಿ ಕಂಪನಿಗಳಲ್ಲಿ ಪ್ರಕಟಿಸುವ ಸೌಲಭ್ಯ ಮತ್ತು ಪ್ಯಾಕೇಜ್‌ಗೆ ಮಾರು ಹೋದ ಯುವಕನೊಬ್ಬ ತನ್ನ ತಾಯಿಯ ಬಳಿ ವಿದೇಶದಲ್ಲಿ ನೌಕರಿ ಮಾಡುವ ಆಸೆಯನ್ನು ಹೇಳಿಕೊಳ್ಳುವ, ಮತ್ತು ಇದಕ್ಕಾಗಿ ಮಧ್ಯಮ ವರ್ಗದ  ಆ ಕುಟುಂಬ ಇತರರೆಡೆಯಿಂದ ಸಾಲ ಮಾಡಿ ಮಗನನ್ನು ವಿದೇಶಕ್ಕೆ ಕಳಿಸುವ ಸನ್ನಿವೇಶ ಮನ ಕಲಕುವಂತಿತ್ತು. ಮಗ ವಿದೇಶದಲ್ಲಿ ನೆಲೆಗೊಂಡ ನಂತರ ಮಗನೊಂದಿಗೆ ಮಾತನಾಡಲು ಆತನ ಸ್ನೇಹಿತನ ಮೊಬೈಲ್‌ನಿಂದ ಮಾತನಾಡುವ ತಾಯಿ, ಕೆಲಸದ ಒತ್ತಡದಲ್ಲಿ ಸಿಡುಕುವ ಮಗ, ತಾಯಿಯ ಕ್ಷೇಮ-ಸಮಾಚಾರಕ್ಕೆ ಸ್ಪಂದಿಸದಿದ್ದಾಗ ಹಾಸಿಗೆ ಹಿಡಿದು ಒಂದು ದಿನ ಸಾವನ್ನಪ್ಪುತ್ತಾಳೆ. ಸ್ನೇಹಿತನಿಂದ ತಾಯಿಯ ಅಗಲಿಕೆಯ ಸುದ್ದಿ ತಿಳಿದ ಮಗನಿಗೆ ತಾಯಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಾನು ದುಡಿಯುತ್ತಿರುವ ಕಂಪನಿ ನಿರಾಕರಿಸಿದಾಗ, ತನ್ನ ದೇಶ, ಭಾಷೆ, ಸಂಸ್ಕೃತಿಯನ್ನು ಬಿಟ್ಟು ಅನ್ಯ ದೇಶದಲ್ಲಿ ಬಂದು ತಪ್ಪು ಮಾಡಿದೆ ಎಂಬ ಭಾವ ಮೊಳೆಯುತ್ತದೆ. ಇಂತಹ ಒಂದು ಬೀದಿ ನಾಟಕ ಆಡಿದ ವಿದ್ಯಾರ್ಥಿಗಳು ತಾವು ಹೇಳಬೇಕೆಂದಿರುವ ವಿಷಯ ವನ್ನು ಮನೋಜ್ಞವಾಗಿ ಕಟ್ಟಿಕೊಟ್ಟಿದ್ದಾರೆ. 

ಬೀದಿ ನಾಟಕದಲ್ಲಿ ಬಿಬಿಎ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ದವನ್ ಕಾಲೇಜಿನ ಶ್ರೇಯಾ ಎಸ್‌. ರೇವಣಕರ್‌, ಶ್ರೀರಕ್ಷಾ, ಹರನ್‌ ಸುರ್ವೆ, ಮೊಹಮ್ಮದ್‌ ರಿಜ್ವಾನ್‌, ಸುಹಾಸ್‌, ಕಲ್ಲೇಶ್‌, ಭರತ್‌, ಗಂಗಮ್ಮ, ನೇಹಾ, ಉಲ್ಲಾಸ್‌, ಪೂರ್ಣಿಮಾ, ತಿಲಕ್‌, ಶಶಾಂಕ್‌ ಮತ್ತು ಅಭಿಜಿ

error: Content is protected !!