ಭ್ರಷ್ಠಚಾರಕ್ಕೆ ಕಡಿವಾಣ ಹಾಕಲು ಲೋಕಪಾಲ್ ಮಸೂದೆ ಜಾರಿ

ಭ್ರಷ್ಠಚಾರಕ್ಕೆ ಕಡಿವಾಣ ಹಾಕಲು ಲೋಕಪಾಲ್ ಮಸೂದೆ ಜಾರಿ

ಆರ್.ಎಲ್. ಕಾನೂನು ಕಾಲೇಜಿನ  ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ

ದಾವಣಗೆರೆ, ಜೂ. 24 – ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರ ಭ್ರಷ್ಠಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಪಾಲ್ ಮತ್ತು ಲೋಕಾಯುಕ್ತರ ಕಾಯಿದೆ ಜಾರಿಗೆ ತರಲಾಗಿದ್ದು, ಈ ಕಾಯ್ದೆಗೆ ಸಂಸತ್ತು ಅಂಗೀಕಾರ ನೀಡಿದೆ. ಈ ನಿಟ್ಟಿನಲ್ಲಿ ಸಾಮಾನ್ಯ ನೌಕರರಿಂದ ಹಿಡಿದು ಪ್ರಧಾನ ಮಂತ್ರಿಗಳು ಸಹ ಲೋಕಪಾಲ್ ವ್ಯಾಪ್ತಿಯಡಿಯಲ್ಲಿ ಬರುತ್ತಾರೆ ಎಂದು ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ತಿಳಿಸಿದರು.

ನಗರದ ಆರ್‍. ಎಲ್‍. ಕಾನೂನು ಕಾಲೇಜಿನಲ್ಲಿ ಐಕ್ಯೂಎಸಿ ನೇತೃತ್ವದಲ್ಲಿ ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ ಲೋಕಪಾಲ್ ಮತ್ತು ಲೋಕಾಯುಕ್ತರ ಕಾಯಿದೆ 2013 ಕುರಿತು ರಾಷ್ಟ್ರ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ಲೋಕಪಾಲ್ ಮಸೂದೆ ಅಡಿ ಕಾನೂನು ಜಾರಿಗೊಳಿಸಲು ಲೋಕಪಾಲರನ್ನು ನೇಮಿ ಸಲಾಗಿದೆ. ಈ ಲೋಕಪಾಲ್ ಸಂಸ್ಥೆ ಸರ್ಕಾರದ ಅನು ಮತಿಯಿಲ್ಲದೆಯೇ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆ ಹಾಗೂ ಶಿಕ್ಷೆಗೆ ಒಳಪಡಿ ಸುವ ಅಧಿಕಾರ ಹೊಂದಿದ್ದು, ಚುನಾವಣಾ ಆಯೋಗ ದಂತೆ ಸ್ವತಂತ್ರ ಸಂಸ್ಥೆಯಾಗಿದೆ ಎಂದು ತಿಳಿಸಿದರು. 

ಭ್ರಷ್ಠಾಚಾರವನ್ನು ನಿಗ್ರಹಿಸುವ ಮತ್ತು ಮಾಹಿತಿದಾರರನ್ನು ರಕ್ಷಿಸುವ ಸಲುವಾಗಿ ಈ ಕಾಯ್ದೆಯಡಿ ಸಾಧ್ಯವಾಗಿದೆ ಎಂದು ಪ್ರತಿಪಾದಿಸಿದರು.

ಮುಖ್ಯ ಅತಿಥಿಯಾಗಿ ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ಮಾತನಾಡಿ, ಸರ್ಕಾರದ ಇಲಾಖೆಗಳಲ್ಲಿ ಲಂಚದ ಹಾವಳಿ ತಡೆಯುವ ಬಗ್ಗೆ ಚರ್ಚೆಗಳು ನಡೆದು, ಸಮಿತಿ ರಚನೆಯಾಗಿ ತದ ನಂತರ 2013ರಲ್ಲಿ ಭಾರತ ಸಂಸತ್ತು ಲೋಕಪಾಲ್ ಮತ್ತು ಲೋಕಾಯುಕ್ತ ಸಂಸ್ಥೆಯನ್ನು ಅಂಗೀಕರಿಸಿತು. ಸರ್ಕಾರದ ವ್ಯವಸ್ಥೆಯಲ್ಲಿ ಲಂಚದ ದೂರುಗಳ ಬಗ್ಗೆ ವಿಚಾರಣೆ ನಡೆಸಲು ಕೇಂದ್ರದ ಮಟ್ಟದಲ್ಲಿ ಲೋಕಪಾಲ್ ಸಂಸ್ಥೆ, ರಾಜ್ಯಗಳ ಮಟ್ಟದಲ್ಲಿ ಲೋಕಾಯುಕ್ತ ಸಂಸ್ಥೆಗಳನ್ನು ಸ್ಥಾಪಿಸಲಾಯಿತು ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಆರ್.ಎಲ್.ಕಾನೂನು ಕಾಲೇಜು ಪ್ರಾಂಶುಪಾಲ ಡಾ.ಜಿ.ಎಸ್.ಯತೀಶ್, ಐಕ್ಯೂಎಸಿ ಸಂಚಾಲಕ ಬಸವನಗೌಡ ಬಿ.ಪಿ. ಕಾರ್ಯಕ್ರಮದ ಸಂಯೋಜಕರಾದ ಡಾ.ಪಂಕಜಾ ಟಿ.ಸಿ,  ಸಹಾಯಕ ಪ್ರಾಧ್ಯಾಪಕ ವಿದ್ಯಾಧರ ವೇದಮೂರ್ತಿ ಟಿ.,ನಿವೃತ್ತ ಪ್ರಾಚಾರ್ಯ ಸೋಮಶೇಖರ್ ಸೇರಿದಂತೆ ಇತರರು ಇದ್ದರು.

error: Content is protected !!