ಹೊಳೆಸಿರಿಗೆರೆ : ಮಲೇರಿಯಾ ವಿರೋಧಿ ಮಾಸಾಚರಣೆ

ಹೊಳೆಸಿರಿಗೆರೆ : ಮಲೇರಿಯಾ ವಿರೋಧಿ ಮಾಸಾಚರಣೆ

ಮಲೇಬೆನ್ನೂರು, ಜು.3- ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಮಾಗೋಡ ಹಾಲಪ್ಪ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ  ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಚೇತನ್ ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು, ಮಲೇರಿಯಾ ಹೇಗೆ ಹರಡುತ್ತದೆ ? ಮತ್ತು ಅದನ್ನು ಹೇಗೆ ತಡೆಗಟ್ಟಬೇಕು ? ಹಾಗೂ ರೋಗ ಬಂದರೆ ಚಿಕಿತ್ಸೆ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು. 

ಶಾಲಾ ಮುಖ್ಯೋಪಾಧ್ಯಾಯ ಕರಿಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಶಂಕರ್, ಪ್ರಕಾಶ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಕಾಶ್ ನಾಯಕ್, ತಿಪ್ಪೇಸ್ವಾಮಿ, ಆರೋಗ್ಯ ಸುರಕ್ಷಣಾಧಿಕಾರಿ ಆಶಾರಾಣಿ, ಆಶಾ ಕಾರ್ಯಕರ್ತೆಯರಾದ ಮಾಲಾಶ್ರೀ, ಪುಷ್ಪಾವತಿ ಭಾಗವಹಿಸಿದ್ದರು.

error: Content is protected !!