ವಸತಿ ನಿಲಯಗಳಲ್ಲಿ ಪೌಷ್ಠಿಕ ಆಹಾರಕ್ಕೆ ಆದ್ಯತೆ ನೀಡಿ

ವಸತಿ ನಿಲಯಗಳಲ್ಲಿ ಪೌಷ್ಠಿಕ ಆಹಾರಕ್ಕೆ ಆದ್ಯತೆ ನೀಡಿ

ದಾವಣಗೆರೆ, ಜು.5- ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ತಮ್ಮ ಗೃಹ ಕಛೇರಿಯಲ್ಲಿ  ಇಂದು ಸಭೆ ನಡೆಸಿದರು.

ಜಿಲ್ಲೆಯ ಹಲವು ವಸತಿ ನಿಲಯಗಳಲ್ಲಿ ಆಹಾರ ಮತ್ತು ಅನೈರ್ಮಲ್ಯದ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದು, ಎಲ್ಲಾ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶ ಮತ್ತು ಗುಣಮಟ್ಟದ ಆಹಾರ ವಿತರಣೆ ಆಗಬೇಕು ಹಾಗೂ ಸ್ವಚ್ಚತೆಗೆ ಕ್ರಮಕೈಗೊಳ್ಳುವಂತೆ ಸಂಸದರು ಅಧಿಕಾರಿಗಳಿಗೆ ಹೇಳಿದರು.

ವಸತಿ ನಿಲಯಗಳ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‍ಗಳನ್ನು ಸೂಕ್ತ ರೀತಿಯಲ್ಲಿ ವಿತರಿಸಬೇಕು. ಸಂಗೀತ ಮತ್ತಿತರೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಲು ಪ್ರೋತ್ಸಾಹಿಸಬೇಕು. ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳು ಭಾಗವಹಿಸಲು ಕ್ರಮ ಕೈಗೊಳ್ಳುವಂತೆ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬೇಬಿ ಸುನೀತಾ ಮತ್ತಿತರರು ಉಪಸ್ಥಿತರಿದ್ದರು.

error: Content is protected !!