ಎನ್‍ಟಿಎ, ನೀಟ್ ಪರೀಕ್ಷೆ ಅವ್ಯವಹಾರ ತನಿಖೆಗೆ ಆಗ್ರಹ

ಎನ್‍ಟಿಎ, ನೀಟ್ ಪರೀಕ್ಷೆ ಅವ್ಯವಹಾರ ತನಿಖೆಗೆ ಆಗ್ರಹ

ರಾಣೇಬೆನ್ನೂರಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

ರಾಣೇಬೆನ್ನೂರು, ಜು. 9- ಎನ್‍ಟಿಎ ಹಾಗೂ ನೀಟ್ ಪರೀಕ್ಷೆಯ ಅವ್ಯವಹಾರದ ಬಗ್ಗೆ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತದಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ಎನ್‍ಎಸ್‍ಯುಐ ನೇತೃತ್ವ ದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ನಗರದ ಬಸ್‍ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿ, ಪ್ರತಿಭಟನೆ ನಡೆಸಿದರು. 

ಶಾಸಕ ಪ್ರಕಾಶ ಕೋಳಿವಾಡ ಪ್ರತಿಭಟ ನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಜೂನ್ ತಿಂಗಳಿನಲ್ಲಿ ನಡೆದ ನೀಟ್ ಪಿಜಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಎನ್‍ಟಿಎ ಫಲಿತಾಂಶದಲ್ಲಿನ ನಡವಳಿಕೆಯ ಹಾಗೂ ಪರೀಕ್ಷೆಗಳನ್ನು ನಡೆಸುವ ಬಗ್ಗೆ, ಪಾರದರ್ಶಕತೆ ಪ್ರಶ್ನಿಸುವ ಹಲವಾರು ದೂರುಗಳು ದೇಶಾ ದ್ಯಂತ ಬರುತ್ತಿವೆ. ಎನ್‍ಟಿಎ ಜಾರಿಗೆ ಬಂದಾಗಿ ನಿಂದ ಪ್ರಮುಖ ಪರೀಕ್ಷೆಗಳಲ್ಲಿ ಗಂಭೀರ ಅವ್ಯವಹಾರಗಳು ಮುಂದುವರಿಕೆಯಾಗಿ ಇದು ಸಂಭವಿಸಿದೆ. ಪರಿಣಾಮವಾಗಿ, ಅಂತಹ ಎನ್‍ಟಿಎ ಸಂಸ್ಥೆಯು ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಎಂಬಿಬಿಎಸ್, ಬಿಡಿಎಸ್ ಪದವಿ ಹಂತದ ಪ್ರವೇಶ ಪರೀಕ್ಷೆಯಲ್ಲಿ ಒಟ್ಟು ಅಂಕಗಳು 70, ಪ್ರತಿ ಸರಿಯಾದ ಉತ್ತರಕ್ಕೆ 4 ಅಂಕಗಳನ್ನು ನೀಡಲಾಗುತ್ತದೆ, ಆದರೆ ಪ್ರತಿ ತಪ್ಪು ಉತ್ತರಕ್ಕೆ 1 ಅಂಕವನ್ನು ಕಡಿತಗೊಳಿಸಲಾಗುತ್ತದೆ, ಆದರೆ ಉತ್ತರಿಸದ ಪ್ರಶ್ನೆಗಳನ್ನು ಗುರುತಿಸಿಲ್ಲ. ಆ ಸಂದರ್ಭದಲ್ಲಿ, ಗಣಿತದ ಪ್ರಕಾರ 719 ಮತ್ತು 718 ನಂತಹ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ಆದರೆ ಅಂತಹ ಪ್ರಕರಣಗಳು ಬಂದಿರುವ ಫಲಿತಾಂಶಗಳಲ್ಲಿ ಕಂಡುಬರುತ್ತಿವೆ. ಈ ವರ್ಷದ ಫಲಿತಾಂಶವು ಗ್ರೇಸ್ ಮಾರ್ಕಿಂಗ್‍ಗಾಗಿ ಎಂದು ಎನ್‍ಟಿಎ ಪ್ರಾಸಂಗಿಕವಾಗಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ವರ್ಷ ಪರೀಕ್ಷೆಗೆ ಮುನ್ನ ಎನ್‍ಟಿಎ ಪ್ರಕಟಿಸಿದ ಮಾರ್ಗಸೂಚಿಗಳಲ್ಲಿ ಎಲ್ಲಿಯೂ ಈ ಗ್ರೇಸ್ ಮಾರ್ಕಿಂಗ್  ಯೋಜನೆಯ ಬಗ್ಗೆ ಉಲ್ಲೇಖಸಿಲ್ಲ. ಇದಲ್ಲದೆ, ಒಂದೇ ಕೇಂದ್ರ ಸತತ ರೋಲ್ ಸಂಖ್ಯೆ ಹೊಂದಿರುವ ಹಲವು ವಿದ್ಯಾರ್ಥಿಗಳು 720 ಕ್ಕೆ 720 ಅಂಕಗಳನ್ನು ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿವೆ ಎಂದು ಹೇಳಿದರು.

ಆ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ. ಹಾಗೆಯೇ ದೊಡ್ಡ ವಿದ್ಯಾರ್ಥಿ ಸಮುದಾಯವು ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇದು ಒತ್ತಾಯಿಸುತ್ತಿದೆ. ಕೇಂದ್ರದ ಸರ್ಕಾರ ವೈದ್ಯಕೀಯ ಶಿಕ್ಷಣದ ಪಠ್ಯಕ್ರಮದಲ್ಲಿ ಗಮನಾ ರ್ಹವಾದ ಕಡಿತ ಮಾಡುತ್ತಾ, ಕಾಲೇಜು ಶುಲ್ಕ ಗಳನ್ನು ಹೆಚ್ಚಿಸುತ್ತಾ ಹಣವುಳ್ಳವರಿಗೆ ಮಾತ್ರ ವೈದ್ಯಕೀಯ ಶಿಕ್ಷಣ ಎಂಬ ಖಾಸಗೀಕರಣ ನೀತಿಗಳನ್ನು ಎನ್‍ಎಂಸಿ ಮತ್ತು ಎನ್‍ಟಿಎ ಸಂಸ್ಥೆಗಳು ಜಂಟಿಯಾಗಿ ಪ್ರೋತ್ಸಾಹಿಸುತ್ತಿವೆ. ಇದು ದೇಶದ ಭವಿಷ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ ಎಂದು ದೂರಿದರು. 

ಈಗ ನೀಟ್ ಪಿಜಿಗೆ ಸಂಬಂಧಿಸಿದಂ ತೆಯೂ ಇದೇ ಆರೋಪ ಕೇಳಿಬರುತ್ತಿದೆ. ಆದ್ದರಿಂದ ಈ ಘಟನೆಗೆ ಸಂಬಂಧಿಸಿದಂತೆ ಕೂಡಲೇ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಮಾಡಬೇಕು ಎಂದು ಆಗ್ರಹಿಸಿದರು. 

ಎನ್‍ಎಸ್‍ಯುಐ ತಾಲೂಕು ಅಧ್ಯಕ್ಷ  ಅರುಣಕುಮಾರ ಎಚ್., ಉಪಾಧ್ಯಕ್ಷ ರಾಘವೇಂದ್ರ ಹಾಗೂ ವಿದ್ಯಾರ್ಥಿಗಳಾದ ಯುವರಾಜ ದೀಪಾವಳಿ, ಶ್ರೀಕಂಠ ಟಿ.ಎಚ್., ಕೇಶವ ಎನ್.ಬಿ., ಗಗನ ಡಿ., ಆದರ್ಶ ಎ, ಪವನ ಎಮ್, ಮಹೇಶ ಡಿ, ಹರೀಶ ಪಾಟೀಲ, ಹರೀಶ ಕೇಲಕರ, ಚಂದ್ರ ಕಮ್ಮಾರ, ವಿಜಯ ಪರಾಶಿ, ಗಣೇಶ ಹಾಲಬಾವಿ, ಉದಯ ಜಿ, ತೇಜು ಸಪ್ಪಾಳಿ, ಸ್ವರೂಪ, ದರ್ಶನ ಕುಂದೂರ ಮತ್ತಿತರರಿದ್ದರು.

error: Content is protected !!