ಭೋವಿ ಸಮಾಜಕ್ಕೆ ಟಿಕೆಟ್ ನೀಡುವಂತೆ ಶ್ರೀಗಳ ಸಲಹೆ

ಭೋವಿ ಸಮಾಜಕ್ಕೆ ಟಿಕೆಟ್ ನೀಡುವಂತೆ ಶ್ರೀಗಳ ಸಲಹೆ

ಭೋವಿ ಗುರುಪೀಠಕ್ಕೆ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಚಿತ್ರದುರ್ಗ, ಜ. 6 – ಇಲ್ಲಿನ ಭೋವಿ ಗುರುಪೀಠಕ್ಕೆ ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳು ಇಂದು ಭೇಟಿ ನೀಡಿ ಶ್ರೀ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಕೆಲ ಕಾಲ ಮಾತುಕತೆ ನಡೆಸಿದರು.

ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ರಾಷ್ಟಿಯ ಪ್ರಧಾನ ಕಾರ್ಯದರ್ಶಿ ಅರಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ನವೀನ್ ಕುಮಾರ್, ನಾರಾಯಣ್ ಸ್ವಾಮಿ, ಶಾಸಕರುಗಳಾದ ತಿಪ್ಪಾರೆಡ್ಡಿ, ಪೂರ್ಣಿಮ,    ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪುತ್ರರಾದ ಬಿಜೆಪಿ  ಮುಖಂಡ ಅಮಿತ್ ಜಿ.ಎಸ್ ಅವರುಗಳಿಗೆ  ಗುರುಗಳಿಂದ ಗೌರವ ಸಮರ್ಪಣೆ ಮಾಡಲಾಯಿತು.

ಟಿಕೆಟ್‌ಗಾಗಿ ರಾಷ್ರೀಯ ನಾಯಕರಿಗೆ ಮನವಿ: ಬಿಜೆಪಿಯ ರಾಷ್ಟ್ರಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ವೇಳೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮಾಯಕೊಂಡ ಕ್ಷೇತ್ರದಲ್ಲಿ ಸ್ಪರ್ಧಿಸಲು ಭೋವಿ ಸಮಾಜದ ಆಕಾಂಕ್ಷಿಗೆ ಟಿಕೆಟ್ ನೀಡುವಂತೆ ತಿಳಿಸಿದರು.

ಈ ವೇಳೆ ಮಾಯಕೊಂಡ ಕ್ಷೇತ್ರದ ಬಿಜೆಪಿ  ಆಕಾಂಕ್ಷಿ ಜಿ.ಎಸ್. ಶ್ಯಾಮ್ ಅವರೊಂದಿಗೆ ಕೆಲ ಸಮಯ ಮಾತುಕತೆ ನಡೆಸಿದ ನಡ್ಡಾ ಅವರು, ಪಕ್ಷ ಕಾಗಿ ಇನ್ನು ಹೆಚ್ಚು ಶ್ರಮ ವಹಿಸಿ ಸಂಘಟಿಸುವುದರ ಜೊತೆಗೆ ಸಮಾಜ ಸೇವೆಯಲ್ಲಿ ಇನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

error: Content is protected !!