ಯುವಕರಲ್ಲಿ ನಾಯಕತ್ವದ ಕೊರತೆ: ಸಿ.ಜಿ. ದಿನೇಶ್

ಯುವಕರಲ್ಲಿ ನಾಯಕತ್ವದ ಕೊರತೆ: ಸಿ.ಜಿ. ದಿನೇಶ್

ದಾವಣಗೆರೆ, ಜು. 18- ಭಾರತವು ಉತ್ತಮ ಯುವಶಕ್ತಿ ಹೊಂದಿರುವ ರಾಷ್ಟ್ರ. ಆದರೆ ಉತ್ತಮ ನಾಯಕತ್ವದ ಕೊರತೆಯನ್ನು ಇಂದಿನ ಯುವಕರಲ್ಲಿ ಕಾಣುತ್ತಿರುವುದು ಬೇಸರದ ಸಂಗತಿ ಎಂದು ಅನ್‌ಮೋಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸಿ.ಜಿ. ದಿನೇಶ್ ಹೇಳಿದರು.

ಶಿರಮಗೊಂಡನಹಳ್ಳಿಯ ಅನ್‌ಮೋಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಳೆದ ವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್‌ಮೋಲ್ ವಿದ್ಯಾಸಂಸ್ಥೆಯು ದೇಶಕ್ಕೆ ಉತ್ತಮ ನಾಗರಿಕರನ್ನು ಸಿದ್ಧಪಡಿಸುವ ದೃಷ್ಟಿಯಿಂದ ಇಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳಲ್ಲಿ ಉತ್ತಮ ನಾಯಕತ್ವದ ಗುಣಗಳನ್ನು ಬಿತ್ತಲಾಗುತ್ತಿದೆ ಎಂದರು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೌಸ್ತುಭ ಜೋಶಿ ನಾಯಕತ್ವದ ಗುಣಗಳ ಬಗ್ಗೆ ಮಾತನಾಡಿದರು. ಅನ್‌ಮೋಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಯು. ಕೊಟ್ರೇಶ್ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!