ನೈಋತ್ಯ ರೈಲ್ವೆಗೆ ಕೇಂದ್ರ ರೈಲ್ವೆ ಬಜೆಟ್ ಹಂಚಿಕೆ

ನೈಋತ್ಯ ರೈಲ್ವೆಗೆ ಕೇಂದ್ರ ರೈಲ್ವೆ ಬಜೆಟ್ ಹಂಚಿಕೆ

2024-25ನೇ ಸಾಲಿನ ಬಜೆಟ್ ನಲ್ಲಿ  ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ 1,09,000 ಕೋಟಿ ರೂ. ಮೀಸಲಿಡಲಾಗಿದೆ

ಕರ್ನಾಟಕಕ್ಕಾಗಿ:

– 2024-25ನೇ ಸಾಲಿಗೆ 7559 ಕೋಟಿ ರೂ.ಗಳ ಕಾರ್ಯ ವೆಚ್ಚದ ಅಡಿಯಲ್ಲಿ ಕರ್ನಾಟಕಕ್ಕೆ ಅತ್ಯಧಿಕ ಬಜೆಟ್ ಹಂಚಿಕೆ ಮಾಡಲಾಗಿದೆ. ಇದು 2009-14ನೇ ಸಾಲಿನ ಸರಾಸರಿ ಬಜೆಟ್ ಅನುದಾನ 835 ಕೋಟಿ ರೂ.ಗಳಿಗೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ. 

– ಪ್ರಸ್ತುತ ಕರ್ನಾಟಕದಲ್ಲಿ 47,016 ಕೋಟಿ ರೂ.ಗಳ ಮೌಲ್ಯದ 3840 ಕಿ.ಮೀ ಉದ್ದದ 31 ಯೋಜನೆಗಳು ಪ್ರಗತಿಯಲ್ಲಿವೆ.

– ಕಳೆದ 10 ವರ್ಷಗಳಲ್ಲಿ ಕರ್ನಾಟಕದಾದ್ಯಂತ 638 ರಸ್ತೆ ಮೇಲ್ಸೇತುವೆಗಳು ಮತ್ತು ರಸ್ತೆ ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ. ಇದು ರಸ್ತೆ ಪ್ರಯಾಣಿಕರಿಗೆ ಸುರಕ್ಷಿತ ಮಾರ್ಗವನ್ನು ಖಾತ್ರಿಪಡಿಸಿದೆ.

– 2014 ರಿಂದ 2024 ರವರೆಗೆ, ಸರಾಸರಿ ವಾರ್ಷಿಕ ಹೊಸ ಮಾರ್ಗವು ಗಮನಾರ್ಹವಾಗಿ 163 ಕಿಲೋಮೀಟರ್‌ಗೆ ಹೆಚ್ಚಾಗಿದ್ದು, ಇದು 2009 ರಿಂದ 2014 ರವರೆಗೆ ವರ್ಷಕ್ಕೆ ಸರಾಸರಿ 113 ಕಿಲೋಮೀಟರ್ ಗೆ ಹೋಲಿಸಿದರೆ 1.4 ಪಟ್ಟು ಹೆಚ್ಚಳವನ್ನು ಕಂಡಿದೆ. 

– ಕರ್ನಾಟಕದಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಒಟ್ಟು 59 ರೈಲ್ವೆ ನಿಲ್ದಾಣಗಳನ್ನು ಪುನರಭಿವೃದ್ಧಿ ಮಾಡಲಾಗುತ್ತಿದೆ. ಈ ರೈಲ್ವೆ ನಿಲ್ದಾಣಗಳು ನಿಲ್ದಾಣಗಳನ್ನು ವಿಶ್ವದರ್ಜೆಯ ಸೌಲಭ್ಯಗಳಾಗಿ ಪರಿವರ್ತಿಸುವುದು.

ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವುದು ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಆಧುನೀಕರಿಸುವುದು ಹಾಗೂ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. 

ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಸೇವೆಗಳನ್ನು ಒದಗಿಸುವ ದೃಷ್ಟಿಕೋನವನ್ನು ಈ ನಿಲ್ದಾಣಗಳು ಹೊಂದಿರಲಿವೆ. 

– 2009-2014 ರ ಅವಧಿಯಲ್ಲಿ ವಿದ್ಯುದ್ದೀಕರಣವು ವರ್ಷಕ್ಕೆ ಸರಾಸರಿ 18 ಕಿ.ಮೀ ಆಗಿದ್ದು, ಮತ್ತು 2014-2024 ರ ಅವಧಿಯಲ್ಲಿ ಸರಾಸರಿ ವಿದ್ಯುದ್ದೀಕರಣವನ್ನು ವರ್ಷಕ್ಕೆ 317 ಕಿ.ಮೀ.ಗೆ ಗಮನಾರ್ಹವಾಗಿ ಹೆಚ್ಚಿಸಲಾಗಿದೆ. ಇದು ಕಳೆದ 10 ವರ್ಷಗಳಲ್ಲಿ 18 ಪಟ್ಟು ಹೆಚ್ಚಾಗಿದೆ.

ನೈಋತ್ಯ ರೈಲ್ವೆಗಾಗಿ:

– ನೈಋತ್ಯ ರೈಲ್ವೆಯಲ್ಲಿ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 1103 ಕೋಟಿ ರೂ.ಗಳ ವೆಚ್ಚದಲ್ಲಿ 46 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಮತ್ತು 5 ಪ್ರಮುಖ ನಿಲ್ದಾಣಗಳನ್ನು ಸಹ ಪುನರ್‌ಭಿವೃದ್ಧಿ ಮಾಡಲಾಗುತ್ತಿದೆ.

– ಯಶವಂತಪುರ ನಿಲ್ದಾಣವನ್ನು 367 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜುಲೈ 2025 ರೊಳಗೆ ಯೋಜನೆಯನ್ನು
ಪೂರ್ಣಗೊಳಿಸುವ ಗುರಿ ಹೊಂದಿದೆ  ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು 484 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಅಕ್ಟೋಬರ್ 2025 ರೊಳಗೆ
ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 

– ಪ್ರಸ್ತುತ ಶೇ.88 ಮಾರ್ಗವು ವಿದ್ಯುದ್ದೀಕರಣಗೊಂಡಿದ್ದು, ಮಾರ್ಚ್ 2025 ರ ವೇಳೆಗೆ ಶೇ.100 ವಿದ್ಯುದ್ದೀಕರಣದ ಗುರಿಯನ್ನು ಹೊಂದಿದೆ ಎಂದು ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

error: Content is protected !!