ಸಾಂಪ್ರದಾಯಿಕ ಕೌಶಲ್ಯಕ್ಕೆ ಕೃತಕ ಬುದ್ಧಿಮತ್ತೆ ಸಾಟಿಯಲ್ಲ

ಸಾಂಪ್ರದಾಯಿಕ ಕೌಶಲ್ಯಕ್ಕೆ ಕೃತಕ ಬುದ್ಧಿಮತ್ತೆ ಸಾಟಿಯಲ್ಲ

ಬಾಪೂಜಿ ಹೈಟೆಕ್ ಬಿ.ಕಾಂ ಕಾರ್ಯಕ್ರಮದಲ್ಲಿ ದಾವಣಗೆರೆ ವಿ.ವಿ. ಮ್ಯಾನೇಜ್‌ಮೆಂಟ್  ಸ್ಟಡೀಸ್ ಅಧ್ಯಕ್ಷ ಡಾ.ಶಶಿಧರ್ 

ದಾವಣಗೆರೆ, ಜು. 24- ಕೃತಕ ಬುದ್ಧಿಮತ್ತೆಯು ನಮ್ಮ ಹಾದಿಯಲ್ಲಿ ಎಷ್ಟೇ ಪ್ರಬಲವಾಗಿ ಬಂದರೂ ನಮ್ಮ ಸಾಂಪ್ರದಾಯಿಕ ಕೌಶಲ್ಯಗಳಿಗೆ ಅವು ಸಾಟಿಯಲ್ಲ,  ಸಾಮಾಜಿಕ ಸಂಪರ್ಕ ಹಾಗೂ ನಿರಂತರ ಅಧ್ಯಯನದಿಂದ  ಸಾಂಪ್ರದಾಯಿಕ ಕೌಶಲ್ಯ ಬರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ವಿಭಾಗದ ಡೀನ್ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಅಧ್ಯಕ್ಷ ಡಾ. ಆರ್. ಶಶಿಧರ್ ಹೇಳಿದರು.  

ನಗರದ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ವಾಣಿಜ್ಯ ವಿಭಾಗದ ವತಿಯಿಂದ ಅಂತಿಮ ಬಿಕಾಂ ವಿದ್ಯಾರ್ಥಿಗಳಿಗೆ ವಿದಾಯ ಹೇಳುವ `ಬೀ ಐ ಹ್ಯಾವ್ 2024′ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ತೊಂದರೆ ತೆಗೆದುಕೊಳ್ಳದೇ ಸಾಧನೆ ಸಾಧ್ಯವಿಲ್ಲ, ಜೇನುಹುಳುಗಳ ನಿರಂತರ ಕ್ರಿಯಾಶೀಲತೆ ಹಾಗೂ ತಾಳ್ಮೆ ಇದಕ್ಕೆ ಸಂಕೇತವಾಗಿದೆ. ಎಷ್ಟು ಚಟುವಟಿಕೆಯಿಂದ ಇರುತ್ತೇವೋ ಅಷ್ಟು ಸಮೃದ್ಧಿಯೂ ಜೀವನದಲ್ಲಿ ಸಾಧ್ಯ ಎಂದರು.

ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್.ವಿ. ಅತ್ಯುತ್ತಮ ಗುಣಮಟ್ಟದ ಬಿ.ಕಾಂ. ಶಿಕ್ಷಣವನ್ನು ಕೊಡಬೇಕೆಂಬ ಸದುದ್ದೇಶದಿಂದ ಕಾಲೇಜಲ್ಲಿ ವಾಣಿಜ್ಯ ವಿಭಾಗವನ್ನು ಆರಂಭಿಸಲಾಯಿತು. ಇದಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರೋತ್ಸಾಹವೂ ಸ್ಮರಣೀಯವಾಗಿದೆ ಎಂದರಲ್ಲದೆ, ಜೀವನ ಕಟ್ಟಿಕೊಳ್ಳಲು ಕಾಲೇಜು ಶಿಕ್ಷಣ ಮುಖ್ಯವಲ್ಲ ಎಂಬ ಕಾಲ ಹೋಯಿತು.  ಶಿಕ್ಷಣದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಾಮರಸ್ಯ ಅವಶ್ಯ ಎಂದರು.  

ಅಧ್ಯಾಪಕ ಜ್ಞಾನೇಶ್ವರ ಮುಂತಾ ದವರು ಭಾಗವಹಿಸಿದ್ದ ಕಾರ್ಯಕ್ರಮ ದಲ್ಲಿ, ಕ್ರೀಡಾ ಮತ್ತು ಶೈಕ್ಷಣಿಕ ಸಾಧಕರಿಗೆ ಬಹುಮಾನ ಮತ್ತು ಟ್ರೋಫಿಗಳನ್ನು ವಿತರಿಸ ಲಾಯಿತು. ಆದಿಲ್ ಮತ್ತು ಅಲ್ಫೀಸಾ ಕಾರ್ಯಕ್ರಮ ನಿರೂಪಿಸಿದರು. ಸ್ಫೂರ್ತಿ ಮತ್ತು ಪ್ರಜ್ಞಾ ಪ್ರಾರ್ಥಿಸಿದರು. ನಿತ್ಯಶ್ರೀ ಸ್ವಾಗತಿಸಿ ದರು. ಪ್ರೊ. ಬಿ.ವಿ. ಶ್ವೇತಾ ವಾರ್ಷಿಕ ವರದಿ ಓದಿದರು. ಅಖಿಲ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮೆಹ್ತಾ ವಂದಿಸಿದರು.

error: Content is protected !!