ಉತ್ತಮ ಆರ್ಥಿಕತೆಗೆ ಪೂರಕವಾದ ಬಜೆಟ್

ಉತ್ತಮ ಆರ್ಥಿಕತೆಗೆ ಪೂರಕವಾದ ಬಜೆಟ್

ದಾವಣಗೆರೆ, ಜು. 24 – ಕೇಂದ್ರ ಸರ್ಕಾರದ ಬಜೆಟ್  ಅಭಿವೃದ್ಧಿಗೆ ಪೂರಕವಾಗಿದ್ದು, ಹಣದುಬ್ಬರ ನಿಯಂತ್ರಿಸುವಲ್ಲಿ  ಯಶಸ್ವಿಯಾಗುವ, ಉತ್ತಮ ಆರ್ಥಿಕತೆಗೆ ಪೂರಕವಾಗಿರುವ ಬಜೆಟ್ ಆಗಿದೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ್ಯಾಮ್‌ ತಿಳಿಸಿದ್ದಾರೆ.

ಸರ್ವರಿಗೂ ಸಮಪಾಲು, ಸಮಬಾಳು ತತ್ವಕ್ಕೆ ಪೂರಕವಾಗಿದೆ. ದೇಶದ 9 ವಲಯಗಳಿಗೆ ಆದ್ಯತೆ ನೀಡಿದೆ. ರೈತರು, ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ದೇಶದ ಪ್ರತಿಯೊಬ್ಬ ನಾಗರಿಕನನ್ನು ಸಬಲೀಕರಣಗೊಳಿಸುವ ಮತ್ತು ಸಮೃದ್ಧ, ಸಶಕ್ತ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಸರ್ವಸ್ಪರ್ಶಿ, ಅಭಿವೃದ್ಧಿ ಪೂರಕ ಬಜೆಟ್ ಅನ್ನು ವಿತ್ತ ಸಚಿವರು ಮಂಡಿಸಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ.

error: Content is protected !!