ನಗರದಲ್ಲಿ ಇಂದು ಜನಜಾಗೃತಿ ಧರ್ಮ ಸಮಾವೇಶ

ನಗರದಲ್ಲಿ ಇಂದು ಜನಜಾಗೃತಿ ಧರ್ಮ ಸಮಾವೇಶ

ಡಾ. ಕೆ.ಸಿ. ಶಿವಮೂರ್ತಿ ಅವರಿಗೆ  ವೈದ್ಯ ಚಿಂತಾಮಣಿ’  ಬಿರುದು ಪ್ರದಾನ

ಶ್ರೀ ಅಭಿನವ ರೇಣುಕ ಮಂದಿರದಲ್ಲಿ ನಡೆಯುತ್ತಿರುವ ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 26ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮೋತ್ತೇಜಕ ಕಾರ್ಯಕ್ರಮದಲ್ಲಿ ಇಂದಿನ ಸಮಾರಂಭದ ವಿವರ.

ಇಂದು ಸಂಜೆ 6.30ಕ್ಕೆ ಏರ್ಪಾಡಾಗಿರುವ ಧರ್ಮೋತ್ತೇಜಕ ಸಮಾರಂಭದ ನೇತೃತ್ವವನ್ನು ಶ್ರೀ ಡಾ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, (ಗವಿಮಠ, ಕಣ್ವಕುಪ್ಪಿ)ವಹಿಸು ವರು. ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು. ಇದೇ ಸಂದರ್ಭದಲ್ಲಿ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ. ಕೆ.ಸಿ. ಶಿವಮೂರ್ತಿ ಅವರಿಗೆ `ವೈದ್ಯ ಚಿಂತಾಮಣಿ’ ಬಿರುದಿನೊಂದಿಗೆ ಗೌರವ ಶ್ರೀರಕ್ಷೆ, ಪ್ರಶಸ್ತಿ ಪ್ರದಾನ ಮಾಡಲಾಗುವುದು.   ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರುಗಳಾದ ಅಥಣಿ ವೀರಣ್ಣ,  ಅಣಬೇರು ರಾಜಣ್ಣ, ಎಸ್.ಎಸ್. ಗಣೇಶ್, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ದಾವಣಗೆರೆ ಹರಿಹರ ಅರ್ಬನ್ ಕೋ ಆಪ್ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಎಸ್.ಕೆ. ವೀರಣ್ಣ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ, ಪಾಲಿಕೆ ಮಾಜಿ ಸದಸ್ಯ ದಿನೇಶ್ ಕೆ. ಶೆಟ್ಟಿ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

error: Content is protected !!