ದೇಹ, ಮನಸ್ಸಿನ ಸ್ವಾಸ್ಥ್ಯಕ್ಕೆ ಕ್ರೀಡೆಯೇ ಔಷಧ : ಸಿದ್ದೇಶ್ವರ

ದೇಹ, ಮನಸ್ಸಿನ ಸ್ವಾಸ್ಥ್ಯಕ್ಕೆ ಕ್ರೀಡೆಯೇ ಔಷಧ : ಸಿದ್ದೇಶ್ವರ

ದಾವಣಗೆರೆ, ಆ. 26- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ ವತಿಯಿಂದ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಭಾಗ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟ ನಡೆಯಿತು. ಕ್ರೀಡೆಯು ದೇಹ ಹಾಗೂ ಮನಸ್ಸಿಗೆ ಆರೋಗ್ಯಕರವಾದ ಔಷಧವೆಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್. ಹೆಬ್ಬಾಳ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ದಾವಣಗೆರೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

error: Content is protected !!