ಉಮೇಶ್ ನಾಯ್ಕರಿಗೆ ರಾಯಣ್ಣ ಪ್ರಶಸ್ತಿ

ಉಮೇಶ್ ನಾಯ್ಕರಿಗೆ ರಾಯಣ್ಣ ಪ್ರಶಸ್ತಿ

ದಾವಣಗೆರೆ, ಆ. 29- ಶ್ರೀ ಕನಕ ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಅಂಗವಾಗಿ ನಗರದಲ್ಲಿ  ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 25 ವರ್ಷಗಳಿಂದ ಜಾನಪದ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ದಾವಣಗೆರೆ ತಾಲ್ಲೂಕಿನ ಚಿನ್ನಸಮುದ್ರ ಗ್ರಾಮದ ಉಮೇಶ ನಾಯ್ಕ ಅವರಿಗೆ 2024ನೇ ಸಾಲಿನ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಡಾ. ಶಿವಾನಂದ ದಳವಾಯಿ, ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!