ಸ್ಫೂರ್ತಿ ಸೇವಾ ಟ್ರಸ್ಟ್‌ನಿಂದ ಪ್ರಶಸ್ತಿ ಪತ್ರ ವಿತರಣೆ

ಸ್ಫೂರ್ತಿ ಸೇವಾ ಟ್ರಸ್ಟ್‌ನಿಂದ ಪ್ರಶಸ್ತಿ ಪತ್ರ ವಿತರಣೆ

ದಾವಣಗೆರೆ, ಆ. 29 – ನಗರದ ದೇವರಾಜ ಅರಸು ಬಡಾವಣೆ ಎ ಬ್ಲಾಕ್‌ನಲ್ಲಿರುವ ಸ್ಫೂರ್ತಿ ಸೇವಾ ಟ್ರಸ್ಟ್‌ನಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದ್ದು, ಈಚೆಗೆ ಅಂಧ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡಿ ಅವರನ್ನು ರಸ್ತೆಯಲ್ಲಿ ಯಾರ ಸಹಾಯವೂ ಇಲ್ಲದೆ ನಡೆದಾಡುವ ಮತ್ತು ಸ್ವಾವಲಂಬಿಗಳ್ನಾಗಿ ಮಾಡಿ ಏಕಾಂಗಿ ಜೀವನ ನಡೆಸುವ ಶೈಲಿಯನ್ನು ರೂಪಿಸಿಕೊಳ್ಳುವಂತಹ ಶಿಕ್ಷಣ ನೀಡಿದ್ದು, ಈ ಶಿಕ್ಷಣದಲ್ಲಿ ತೇರ್ಗಡೆ ಹೊಂದಿದ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಅವರಿಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ 15ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಮತ್ತು ಕಾಂಗ್ರೆಸ್ ಮುಖಂಡ ಉಮೇಶ್ ದಂಪತಿ ಈ ಭಾಗದ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಿಕಾ ವರದಿಗಾರ ಬೇಕರಿ ವಿರೂಪಾಕ್ಷ ಪ್ರಶಸ್ತಿ ಪತ್ರ ವಿತರಿಸಿ, ಸ್ಫೂರ್ತಿ ಸೇವಾ ಟ್ರಸ್ಟ್‌ಗೆ ಶುಭ ಹಾರೈಸಿದರು.

ಸಂಸ್ಥೆಯ ಮುಖ್ಯಸ್ಥರುಗಳಾದ ರೂಪನಾಯಕ್, ರೇಣುಕಮ್ಮ, ಕೃಷ್ಣ, ಉದ್ಯೋಗಿಗಳಾದ ಪೂಜಾ, ಅನುಸೂಯಮ್ಮ, ಭಾರತಿ ಉಪಸ್ಥಿತರಿದ್ದರು.

error: Content is protected !!