ದಾವಣಗೆರೆ, ಸೆ.1- ಜಯದೇವ ಪ್ರಸಾದ ನಿಲಯಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿ, ಲಕ್ಷಾಂತರ ಯುವಕ ದಾರಿಗೆ ಬೆಳಕಾದ ಶ್ರೀ ಜಯದೇವ ಜಗದ್ಗುರುಗಳ 150ನೇ ಜನ್ಮ ದಿನದ ಅಂಗವಾಗಿ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಜಯದೇವ ಸ್ವಾಮೀಜಿ ಕಂಚಿನ ಪ್ರತಿಮೆಗೆ ಶಿವಸಿಂಪಿ ಸಮಾಜದ ಅಧ್ಯಕ್ಷರ ಚಿಂದೋಡಿ ಚಂದ್ರಧರ್ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಸಮಾಜದ ಮುಖಂಡರು, ಜಯದೇವ ಪ್ರಸಾದ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಯದೇವ ಶ್ರೀಗಳ ಪ್ರತಿಮೆಗೆ ಪುಷ್ಪ ನಮನ
