ದಾವಣಗೆರೆ, ಸೆ.11- 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಪಥ ಸಂಚಲನದಲ್ಲಿ ಕಾಲೇಜು ಎನ್.ಸಿ.ಸಿ. ಕೆಡೆಟ್ ವಿಭಾಗದಿಂದ ಬಾಪೂಜಿ ವಿದ್ಯಾಸಂಸ್ಥೆಯ ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ನಗರದ ಎ.ಆರ್.ಜಿ. ಕಾಲೇಜಿಗೆ ದ್ವಿತೀಯ ಬಹುಮಾನ
