ಮಲೇಬೆನ್ನೂರಿನಲ್ಲಿ ವಿಶ್ವಕರ್ಮ ಜಯಂತಿ

ಮಲೇಬೆನ್ನೂರಿನಲ್ಲಿ ವಿಶ್ವಕರ್ಮ ಜಯಂತಿ

ಮಲೇಬೆನ್ನೂರು, ಸೆ.19- ಇಲ್ಲಿನ ಕಾಳಿಕಾದೇವಿ ದೇವಸ್ಥಾನದಲ್ಲಿ ಮಂಗಳವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.

ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪಿಎಸ್ಐ ಪ್ರಭು ಕೆಳಗಿನಮನಿ ಅವರು ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸಿದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ಶ್ರೀನಿವಾಸಚಾರ್, ಸಮಾಜದ ಮುಖಂಡರಾದ ಎನ್.ಪ್ರಕಾಶ್, ಆನಂದಚಾರ್, ದಿನೇಶ್ ಚಾರ್, ಪುರಸಭೆ ಸದಸ್ಯರಾದ ಬಿ.ಮಂಜುನಾಥ್, ಪಿ.ಆರ್.ರಾಜು, ಎ.ಕೆ.ಲೋಕೇಶ್, ಡಿ.ದೇವರಾಜ್, ಡಿ.ಕುಮಾರ್ ಮತ್ತಿತರರು ಭಾಗವಹಿಸಿದ್ದರು.

error: Content is protected !!