ಅಕ್ಕಮಹಾದೇವಿ ಸಮಾಜದಿಂದ ನೇತ್ರದಾನ ಪ್ರೇರಣಾ ಪಕ್ಷಾಚರಣೆ

ಅಕ್ಕಮಹಾದೇವಿ ಸಮಾಜದಿಂದ  ನೇತ್ರದಾನ ಪ್ರೇರಣಾ ಪಕ್ಷಾಚರಣೆ

ದಾವಣಗೆರೆ, ಸೆ. 23-ನಗರದ ಶ್ರೀ ಅಕ್ಕಮಹಾದೇವಿ ನೇತ್ರದಾನ ಪ್ರೇರಣಾ ಸಮಿತಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನೇತ್ರದಾನ ಪ್ರೇರಣಾ ಪಕ್ಷಾಚರಣೆ ದಿನಾಚರಣೆಯನ್ನು ಸ್ಥಳೀಯ ಶ್ರೀಮತಿ ಮೋತಿ ಚನ್ನಬಸಮ್ಮ ವೀರಪ್ಪ ಕಲ್ಯಾಣ ಮಂಟಪದಲ್ಲಿ ನೆರವೇರಿಸಲಾಯಿತು.

ಮಹಾತ್ಮ ವಿದ್ಯಾಶಾಲೆಯಲ್ಲಿ ತಪಾಸಣೆ ಮಾಡಿದ ಮಕ್ಕಳಿಗೆ ಉಚಿತ ಕನ್ನಡಕ ವಿತರಿಸಲಾಯಿತು. ವೀರಶೈವ ಪುಣ್ಯಾಶ್ರಮದ ಅಂಧ ಮಕ್ಕಳಿಗೆ ಚಿಕಿತ್ಸೆ ಹಾಗೂ ಕಣ್ಣಿನ ಔಷಧಿ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ದಾವಣಗೆರೆ –
ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಡಾ. ಮಂಜುನಾಥ್ ಪಾಟೀಲ್, ರಂಗನಾಥ್, ಶ್ರೀ ಅಕ್ಕಮಹಾದೇವಿ ನೇತ್ರದಾನ ಪ್ರೇರಣಾ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕಾರ್ಯಕಾರಿಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

error: Content is protected !!