ಕಾರ್ಮಿಕ ಮುಖಂಡ ಕೆ. ರಾಘವೇಂದ್ರ ನಾಯರಿಗೆ ರಾಜ್ಯ ಪ್ರಶಸ್ತಿ

ಕಾರ್ಮಿಕ ಮುಖಂಡ ಕೆ. ರಾಘವೇಂದ್ರ ನಾಯರಿಗೆ ರಾಜ್ಯ ಪ್ರಶಸ್ತಿ

ದಾವಣಗೆರೆ, ಸೆ.25 – ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸಂಘವು ಕೊಡ ಮಾಡುವ `ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ರತ್ನ’ ರಾಜ್ಯ ಪ್ರಶಸ್ತಿಗೆ ನಾಯರಿ ಸಮಾಜಕ್ಕೆ ಸೇರಿದ ಹಾಗೂ ಕಾರ್ಮಿಕ ಮುಖಂಡ ಕೆ.ರಾಘವೇಂದ್ರ ನಾಯರಿ ಅವರು ಭಾಜನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತ್ಯೋತ್ಸವದ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಕಳೆದ ವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾರ್ಮಿಕ ಸಂಘಟನೆ, ಯಕ್ಷಗಾನ ಕಲೆ, ಸಾಹಿತ್ಯ, ಜನಪರ ಹೋರಾಟಗಳು, ಕನ್ನಡಪರ ಸಂಘಟನೆ, ಸಾಮಾಜಿಕ ಸೇವೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ  ರಾಘವೇಂದ್ರ ನಾಯರಿ ಅವರಿಗೆ  ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. 

error: Content is protected !!