ಹರಪನಹಳ್ಳಿ : ನಾಗಪುರ ದೀಕ್ಷಾ ಭೂಮಿ ಯಾತ್ರಿಗಳಿಗೆ ಬೀಳ್ಕೊಡುಗೆ

ಹರಪನಹಳ್ಳಿ : ನಾಗಪುರ ದೀಕ್ಷಾ ಭೂಮಿ ಯಾತ್ರಿಗಳಿಗೆ ಬೀಳ್ಕೊಡುಗೆ

ಹರಪನಹಳ್ಳಿ, ಅ.14- ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ದೀಕ್ಷೆ ಪಡೆದ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಹೊರಟ 30 ಜನ ಅಂಬೇಡ್ಕರ್ ಅನುಯಾಯಿಗಳನ್ನು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು  ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕರಾದ ಯಾಸ್ಮಿನ್, ಎನ್.ಜಿ.ಬಸವರಾಜ, ಮತ್ತೂರು ಬಸವರಾಜ ಸೇರಿದಂತೆ, ಅಂಬೇಡ್ಕರ್ ಅನುಯಾಯಿಗಳು ಇದ್ದರು.

error: Content is protected !!