ಪೌರ ಕಾರ್ಮಿಕ ನಿವಾಸಿಗಳ ಬಡಾವಣೆಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದ ಶಾಸಕ ಹರೀಶ್

ಪೌರ ಕಾರ್ಮಿಕ ನಿವಾಸಿಗಳ ಬಡಾವಣೆಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದ ಶಾಸಕ ಹರೀಶ್

ಹರಿಹರ, ಅ.20- ನಗರದಲ್ಲಿ ಕಳೆದ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ನಗರದ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಹತ್ತಿರದ ಪೌರ ಕಾರ್ಮಿಕ ನಿವಾಸಿಗಳ ಬಡಾವಣೆಗೆ ಶಾಸಕ ಬಿ.ಪಿ. ಹರೀಶ್ ಭೇಟಿಕೊಟ್ಟು ಸ್ಥಳ ಪರಿಶೀಲನೆ ನಡೆಸಿ ಸ್ಥಳಿಯ ನಿವಾಸಿಗಳಿಂದ ಸಮಸ್ಯೆಗಳನ್ನು ಆಲಿಸಿದರು.

ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ದ್ವೀಪದ , ತೊಂದರೆಗಳು ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿಯವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ, ಜಲಸಿರಿ ಅಧಿಕಾರಿ ನವೀನ್ ಕುಮಾರ್, ಆರೋಗ್ಯ ಇಲಾಖೆಯ ಸಂತೋಷ ನಾಯ್ಕ್, ರವಿಪ್ರಕಾಶ್, ಇಂಜಿನಿಯರ್ ಪ್ರಕಾಶ್, ಶಶಿಧರ್, ಬಿಜೆಪಿ ಮುಖಂಡರು ಹಾಜರಿದ್ದರು.

error: Content is protected !!