ಶ್ರೀ ಕೋಟೆ ಆಂಜನೇಯ ದೇವಸ್ಥಾನ ಉದ್ಘಾಟನೆ, ಶಿಲಾಮೂರ್ತಿ, ನವಗ್ರಹ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಇಂದು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಮಘಟ್ಟ ಪುರವರ್ಗ ಮಠದ ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾ ಸ್ವಾಮೀಜಿ ದಿವ್ಯ ಸಾನ್ನಿಧ್ಯ ಮತ್ತು ಆವರಗೊಳ್ಳದ ಶ್ರೀ ದೊಡ್ಡವೀರಯ್ಯ ಶಾಸ್ತ್ರಿಗಳ ಪೌರೋಹಿತ್ಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಏರ್ಪಾ ಡಾಗಿರುವ ಧಾರ್ಮಿಕ ಸಭೆಯನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸ ಲಿದ್ದು, ದೊಡ್ಡಬಾತಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೆಸಿಬಿ ಹನುಮಂತಪ್ಪ ಅಧ್ಯಕ್ಷತೆ ವಹಿಸುವರು.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಲೋಕಸಭಾ ಸದಸ್ಯ ಡಾ. ಪ್ರಭಾ ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಮಾಜಿ ಶಾಸಕರುಗಳಾದ ಎಸ್.ವಿ. ರಾಮಚಂದ್ರ, ಹೆಚ್.ಎಸ್. ಶಿವಸಂಕರ್, ಎಸ್. ರಾಮಪ್ಪ, ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ, ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ಥ್ ಅತಿಥಿಗಳಾಗಿದ್ದಾರೆ.