ದಾವಣಗೆರೆ, ಡಿ.3- ಸಂಯುಕ್ತ ರೈತ ಹೋರಾಟ ಸಮಿತಿ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಕೇಂದ್ರ ಸಮಿತಿ ಕರೆಯ ಮೇರೆಗೆ ನಡೆದ, ರೈತರ ಮತ್ತು ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿ ಎಚ್ಚರಿಕಾ ರ್ಯಾಲಿ ಅಂಬೇಡ್ಕರ್ ಸರ್ಕಲ್ನಿಂದ ಆರಂಭವಾಗಿ ಜಯದೇವ ಸರ್ಕಲ್, ಅಶೋಕ ರಸ್ತೆ, ಮಹಾತ್ಮ ಗಾಂಧಿ ಸರ್ಕಲ್, ಹಳೆ ಬಸ್ ನಿಲ್ದಾಣದ ರಸ್ತೆ ಮೂಲಕ ಸಾಗಿ ದಾವಣಗೆರೆ ಉಪ ವಿಭಾಗಾಧಿಕಾರಿಗಳ ಕಚೇರಿ ಬಳಿ ತೆರಳಿ ಅಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಬಹಿರಂಗ ಸಭೆ ನಡೆಸಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಕಳುಹಿಸಲು ಮನವಿ ಸಲ್ಲಿಸಲಾಯಿತು.
ರೈತರ, ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಎಚ್ಚರಿಕಾ ರ್ಯಾಲಿ
