ವೀರಯ್ಯಗೆ ರಾಜ್ಯೋತ್ಸವ ಪ್ರಶಸ್ತಿ

ವೀರಯ್ಯಗೆ ರಾಜ್ಯೋತ್ಸವ ಪ್ರಶಸ್ತಿ

ದಾವಣಗೆರೆ, ಡಿ. 5- ಇಲ್ಲಿನ ಮಹಾನಗರ ಪಾಲಿಕೆ ರಂಗಮಂದಿರದಲ್ಲಿ ಮಹಾನಗರ ಪಾಲಿಕೆ, ಕನ್ನಡ ಪರ ಸಂಘ-ಸಂಸ್ಥೆಗಳು ಹಾಗೂ ಪತ್ರಕರ್ತರ ಸಹಯೋಗದಲ್ಲಿ ಕಳೆದ ವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ
ಶ್ರೀ ಡಿ. ದೇವರಾಜ ಅರಸು ಬಡಾವಣೆ ಎ ಬ್ಲಾಕ್‌ನ ಸಮಾಜ ಸೇವಕ ಕೆ.ಎಂ. ವೀರಯ್ಯ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಮಹಾಪೌರರಾದ ಕೆ. ಚಮನ್ ಸಾಬ್, ಆಯುಕ್ತರಾದ ಶ್ರೀಮತಿ ರೇಣುಕ, ಪಾಲಿಕೆ ಸದಸ್ಯ ಶ್ರೀಮತಿ ಆಶಾ ಉಮೇಶ್, ಕಾಂಗ್ರೆಸ್ ಮುಖಂಡರುಗಳಾದ ಉಮೇಶ್, ಕೆ.ಜಿ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!