ದಾವಣಗೆರೆ, ಫೆ. 2- ನಗರದ ಕೊಟ್ಟೂರು ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ ಭಕ್ತರು ಪಾದಯಾತ್ರೆ ಕೈಗೊಳ್ಳುವ ಮುನ್ನ ವಿರಕ್ತಮಠದ ಆವರಣದಲ್ಲಿ ಇದೇ ದಿನಾಂಕ 7 ರಿಂದ 17 ರವರೆಗೆ ಪ್ರತಿ ದಿನ ಸಂಜೆ 6 ರಿಂದ 8.30 ರವರೆಗೆ ಶ್ರೀ ಕೊಟ್ಟೂರು ಗುರು ಬಸವೇಶ್ವರರ ಪುರಾಣ-ಪ್ರವಚನ ಹಮ್ಮಿಕೊಳ್ಳಲಾಗಿದೆ.
ಮರೋಳ ಹಿರೇಮಠದ ಮುದುಕಯ್ಯ ಶಾಸ್ತ್ರಿಗಳು ಪ್ರವಚನ ನಡೆಸಿಕೊಡಲಿದ್ದು, ಭಕ್ತರು ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಟ್ರಸ್ಟ್ ಪದಾಧಿಕಾರಿಗಳು ಕೋರಿದ್ದಾರೆ.