ಪುಟ್ಟಮ್ಮಗೆ ಗೈಡ್ಸ್ ಸಂಸ್ಥೆ ಶ್ರದ್ಧಾಂಜಲಿ

ದಾವಣಗೆರೆ, ಮಾ.10- ಇತ್ತೀಚೆಗೆ ನಿಧನರಾದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಪುಟ್ಟಮ್ಮ ಮಹಾರುದ್ರಯ್ಯ ಅವರಿಗೆ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಶ್ರದ್ದಾಂಜಲಿ ಸಲ್ಲಿಸಲಾಯಿತು.

ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತರೂ, ಮಾಜಿ ಸಚಿವರೂ ಆದ ಪಿ.ಜಿ.ಆರ್. ಸಿಂಧ್ಯಾ ಅವರು ಮಾತನಾಡಿ,  ಪುಟ್ಟಮ್ಮ ನವರ ಸೇವೆ ಆದರ್ಶನಿಯವಾದದ್ದು ಎಂದು ನುಡಿದರು. 

ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಜೆ. ಚಿಗಟೇರಿ,ಜಿಲ್ಲಾ ಸ್ಕೌಟ್ ಆಯುಕ್ತ ಎ.ಪಿ. ಷಡಾಕ್ಷರಪ್ಪ, ರಾಜ್ಯ ಸಂಘಟನಾ ಆಯುಕ್ತರಾದ ಶ್ರೀಮತಿ ಮಂಜುಳಾ, ಅಧ್ಯಕ್ಷರಾದ  ಮಹಮದ್ ವಾಸಿಲ್ ಅವರುಗಳು ಪುಟ್ಟಮ್ಮನವರ ಸೇವೆಯನ್ನು ಸ್ಮರಿಸಿ, ಶಾಂತಿ ಕೋರಿದರು. 

ನಂತರ ಪಿ.ಜಿ.ಆರ್. ಸಿಂಧ್ಯಾ ಅವರ ನೇತೃತ್ವದಲ್ಲಿ ಮೃತರ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರದ ಮೇಲೆ ಸ್ಕೌಟ್ ಮತ್ತು ಗೈಡ್ಸ್ ಧ್ವಜವನ್ನು ಹೊದಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.

error: Content is protected !!