ವೀರಶೈವ ಸಭಾದಿಂದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಣೆ

ದಾವಣಗೆರೆ, ಏ.20- ದೇಶದಾದ್ಯಂತ ಕೊರೊನಾದ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿ ಕೊರೊನಾ ಸೋಂಕಿನ ವಿರುದ್ದ ಹೋರಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ದೇವರಮನೆ ಶಿವಕುಮಾರ್ ಸಾರ್ವಜನಿಕರಿಗೆ ತಿಳಿ ಹೇಳಿದರು.

ಇಂದು ನಗರದ ಗಡಿಯಾರ ಕಂಬದ ಬಳಿ ಕೋವಿಡ್ ವೈರಸ್ ಹರಡುವಿಕೆ ತಡೆಗಟ್ಟುವ ಬಗ್ಗೆ ಹಾಗೂ ಮಾಸ್ಕ್ ಬಳಕೆಯ ಅರಿವು ಮೂಡಿಸುವ ಸಲುವಾಗಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ರಸ್ತೆ ಬದಿ ವ್ಯಾಪಾರಿಗಳಿಗೆ, ಆಟೋ ಚಾಲಕರಿಗೆ, ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು. 

ಈ ವೇಳೆ ಮಾತನಾಡಿದ ದೇವರಮನೆ ಶಿವಕುಮಾರ್, ಮುಂದಿನ ದಿನಗಳಲ್ಲಿ ನಗರದಾದ್ಯಂತ ಉಚಿತವಾಗಿ ಮಾಸ್ಕ್ ವಿತರಣೆಯನ್ನು ನಮ್ಮ ಘಟಕದ ವತಿಯಿಂದ  ಮಾಡಲಾಗುವುದು ಎಂದು ಹೇಳಿದರು.

ವಿಜಯಲಕ್ಷ್ಮಿ ರಸ್ತೆ, ಕಾಯಿಪೇಟೆ, ತರಕಾರಿ ಮಾರುಕಟ್ಟೆ ಸೇರಿದಂತೆ ನಗರದ ಹಲವು ಕಡೆ ಸಾವಿರ ಮಾಸ್ಕ್‌ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯರಾದ ಶಿವನಗೌಡ ಟಿ. ಪಾಟೀಲ್, ಟಿಂಕರ್ ಮಂಜಣ್ಣ, ಕರಿಯಪ್ಳರ ಸಿದ್ದೇಶ್, ಮಾಗಿ ಪ್ರಕಾಶ್, ಶೀಕಾಂತ್ ನೀಲಗುಂದ, ಅಭಿಷೇಕ್ ಪಿ. ಎಳೆಹೊಳೆ, ಶಿವಾನಂದ ಬೆನ್ನೂರ್, ದೇವೇಂದ್ರಪ್ಪ, ಮಹಿಳಾ ಘಟಕದ ಶೋಭಾ ಕೊಟ್ರೇಶ್, ಪುಷ್ಪಾ ವಾಲಿ, ದ್ರಾಕ್ಷಾಯಣಿ, ಕವಿತಾ, ಸುಮಂಗಲಾ ಸೇರಿದಂತೆ ಇತರರು ಇದ್ದರು.

error: Content is protected !!