ಕೊಟ್ಟೂರು, ಏ.26- ಮೂಲಭೂತ ಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ-ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಕೊಟ್ಟೂರು ತಾಲ್ಲೂಕು ಕಛೇರಿ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಆನಂದಸಿಂಗ್ ಅಧಿಕಾರಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು. ನಂತರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಜಿ. ಅನಿಲ್ಕುಮಾರ್ ಹಾಜರಿದ್ದರು.